ವೃತ್ತಿ ಶಿಕ್ಷಣ ಪ್ರದರ್ಶನ-ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣ ಅವಕಾಶ-ಜಿ.ಪಂ.ಸಿಇಒ ರುಚಿ ಬಿಂದಲ್

Date:

ವೃತ್ತಿ ಶಿಕ್ಷಣ ಪ್ರದರ್ಶನ-ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣ ಅವಕಾಶ-ಜಿ.ಪಂ.ಸಿಇಒ ರುಚಿ ಬಿಂದಲ್
ಹಾವೇರಿ : ವಿದ್ಯಾರ್ಥಿಗಳು ತಮ್ಮ ಭವಿ?ವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು.
ಇಜಾರಿಲಕಮಾಪೂರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಸೋಮವಾರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ವೃತ್ತಿ ಪ್ರಪಂಚದ ಅರಿವು ಮತ್ತು ಆಯ್ಕೆಗಳ ಮಾರ್ಗದರ್ಶನ ನೀಡಲು ಆಯೋಜಿಸಲಾದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳು ಮತ್ತು ಲಭ್ಯವಿರುವ ಉದ್ಯೋಗವಕಾಶಗಳ ಬಗ್ಗೆ ಅರಿವು ಮೂಡಿಸುವುದು, ೧೨ನೇ ತರಗತಿಯ ನಂತರದ ವಿವಿಧ ಪ್ರವೇಶ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುವುದು, ವಿವಿಧ ಕೋರ್ಸ್‌ಳಿಗೆ ಇಲಾಖೆಯಿಂದ ಲಭ್ಯವಿರುವ ಆರ್ಥಿಕ ನೆರವು, ಜಿಲ್ಲೆಯಲ್ಲಿ ಲಭ್ಯವಿರುವ ಇಲಾಖಾ ವಸತಿ ನಿಲಯಗಳ ವಿವರ, ಯುವಕರಿಗೆ/ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ನೀಡಲಾಗುವ ವೃತ್ತಿಪರ ತರಬೇತಿಗಳು, ಉದ್ಯಮಶೀಲತೆ ಅಥವಾ ಉನ್ನತ ವ್ಯಾಸಂಗಕ್ಕೆ ನೀಡಲಾಗುವ ಇತರೆ ಇಲಾಖಾ ಸೌಲಭ್ಯಗಳ ಮಾಹಿತಿ ನೀಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ವೃತ್ತಿ ಮೇಳದ ಮಳಿಗೆಗಳ ಉದ್ಘಾಟನೆ ನೆರವೇಡಿ ಮಾತನಾಡಿ, ಮುಂದಿನ ಭವಿ?ದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ಅಭಿರುಚಿ ಮತ್ತು ಆಸಕ್ತಿಯ ಮೇರೆಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು, ಉತ್ತಮ ಭವಿಷಯ್ಯಕ್ಕಾಗಿ ಪ್ರಯತ್ನ ಹಾಗೂ ಪರಿಶ್ರಮ ಪಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮೇಳದಲ್ಲ್ಲಿ ಒಟ್ಟು ೧೯ ಮಾರ್ಗದರ್ಶನ ಕೇಂದ್ರಗಳನ್ನು ತೆರೆದು, ಮೇಳಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪದವಿ ಪೂರ್ವ ಶಿಕ್ಷಣದ ನಂತರದ ಕೌಶಲ್ಯಯುತವಾದ ಕೋರ್ಸಗಳ ಬಗ್ಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಯಾವ ತರಬೇತಿಗಳನ್ನು ಆಯ್ಕೆ ಮಾಡಿದಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಬಹುದು ಎಂಬುದರ ಬಗ್ಗೆ ಪರಿಣಿತರು ಮಾರ್ಗದರ್ಶನ ನೀಡಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ (ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ಝಡ್ ಎಂ ಖಾಜಿ, ಕಾರ್ಯಕ್ರಮದ ಹಿರಿಯ ಉಪನ್ಯಾಸಕ ಹಾಗೂ ನೋಡಲ್ ಅಧಿಕಾರಿ ಮೌನೇಶ ಬಡಿಗೇರ ಹಾಗೂ ಸಂಸ್ಥೆಯ ಎಲ್ಲ ಉಪನ್ಯಾಸಕರು ಇತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ವೃತ್ತಿ ಶಿಕ್ಷಣ ಪ್ರದರ್ಶನ-ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣ ಅವಕಾಶ-ಜಿ.ಪಂ.ಸಿಇಒ ರುಚಿ ಬಿಂದಲ್
ಹಾವೇರಿ : ವಿದ್ಯಾರ್ಥಿಗಳು ತಮ್ಮ ಭವಿ?ವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು.
ಇಜಾರಿಲಕಮಾಪೂರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಸೋಮವಾರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ವೃತ್ತಿ ಪ್ರಪಂಚದ ಅರಿವು ಮತ್ತು ಆಯ್ಕೆಗಳ ಮಾರ್ಗದರ್ಶನ ನೀಡಲು ಆಯೋಜಿಸಲಾದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳು ಮತ್ತು ಲಭ್ಯವಿರುವ ಉದ್ಯೋಗವಕಾಶಗಳ ಬಗ್ಗೆ ಅರಿವು ಮೂಡಿಸುವುದು, ೧೨ನೇ ತರಗತಿಯ ನಂತರದ ವಿವಿಧ ಪ್ರವೇಶ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುವುದು, ವಿವಿಧ ಕೋರ್ಸ್‌ಳಿಗೆ ಇಲಾಖೆಯಿಂದ ಲಭ್ಯವಿರುವ ಆರ್ಥಿಕ ನೆರವು, ಜಿಲ್ಲೆಯಲ್ಲಿ ಲಭ್ಯವಿರುವ ಇಲಾಖಾ ವಸತಿ ನಿಲಯಗಳ ವಿವರ, ಯುವಕರಿಗೆ/ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ನೀಡಲಾಗುವ ವೃತ್ತಿಪರ ತರಬೇತಿಗಳು, ಉದ್ಯಮಶೀಲತೆ ಅಥವಾ ಉನ್ನತ ವ್ಯಾಸಂಗಕ್ಕೆ ನೀಡಲಾಗುವ ಇತರೆ ಇಲಾಖಾ ಸೌಲಭ್ಯಗಳ ಮಾಹಿತಿ ನೀಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ವೃತ್ತಿ ಮೇಳದ ಮಳಿಗೆಗಳ ಉದ್ಘಾಟನೆ ನೆರವೇಡಿ ಮಾತನಾಡಿ, ಮುಂದಿನ ಭವಿ?ದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ಅಭಿರುಚಿ ಮತ್ತು ಆಸಕ್ತಿಯ ಮೇರೆಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು, ಉತ್ತಮ ಭವಿಷಯ್ಯಕ್ಕಾಗಿ ಪ್ರಯತ್ನ ಹಾಗೂ ಪರಿಶ್ರಮ ಪಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮೇಳದಲ್ಲ್ಲಿ ಒಟ್ಟು ೧೯ ಮಾರ್ಗದರ್ಶನ ಕೇಂದ್ರಗಳನ್ನು ತೆರೆದು, ಮೇಳಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪದವಿ ಪೂರ್ವ ಶಿಕ್ಷಣದ ನಂತರದ ಕೌಶಲ್ಯಯುತವಾದ ಕೋರ್ಸಗಳ ಬಗ್ಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಯಾವ ತರಬೇತಿಗಳನ್ನು ಆಯ್ಕೆ ಮಾಡಿದಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಬಹುದು ಎಂಬುದರ ಬಗ್ಗೆ ಪರಿಣಿತರು ಮಾರ್ಗದರ್ಶನ ನೀಡಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ (ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ಝಡ್ ಎಂ ಖಾಜಿ, ಕಾರ್ಯಕ್ರಮದ ಹಿರಿಯ ಉಪನ್ಯಾಸಕ ಹಾಗೂ ನೋಡಲ್ ಅಧಿಕಾರಿ ಮೌನೇಶ ಬಡಿಗೇರ ಹಾಗೂ ಸಂಸ್ಥೆಯ ಎಲ್ಲ ಉಪನ್ಯಾಸಕರು ಇತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಸತ್ಯದ ಜೊತೆ ದೈವ ಶಕ್ತಿ ಸದಾ ಇರುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು

ಸತ್ಯದ ಜೊತೆ ದೈವ ಶಕ್ತಿ ಸದಾ ಇರುತ್ತದೆ : ಶ್ರೀ ರಂಭಾಪುರಿ...

ಹೊಸಕಿತ್ತೂರಿನಲ್ಲಿ ಅಪ್ಪು ಡ್ಯಾನ್ಸ ಅಕಾಡೆಮಿಯಿಂದ ಕಿತ್ತೂರು ಉತ್ಸವ

ಹೊಸಕಿತ್ತೂರಿನಲ್ಲಿ ಅಪ್ಪು ಡ್ಯಾನ್ಸ ಅಕಾಡೆಮಿಯಿಂದ ಕಿತ್ತೂರು ಉತ್ಸವ ಹಾವೇರಿ: ತಾಲೂಕಿನ ಹೊಸಕಿತ್ತೂರಿನಲ್ಲಿ ಭಾನುವಾರ...

ಹಾವೇರಿಯಲ್ಲಿ ಅಲೆಮಾರಿಗಳಿಗಾಗಿ ತೆರೆದಿದೆ ಪುಟ್ಟ ಗುಡಿಸಲಿನಲ್ಲಿ ಗ್ರಂಥಾಲಯ

ಹಾವೇರಿಯಲ್ಲಿ ಅಲೆಮಾರಿಗಳಿಗಾಗಿ ತೆರೆದಿದೆ ಪುಟ್ಟ ಗುಡಿಸಲಿನಲ್ಲಿ ಗ್ರಂಥಾಲಯ ಹಾವೇರಿ: ಒಂದು ಕಾಲದಲ್ಲಿ...

ನಾಡಿನ ಸಮಸ್ತ ಮಹಾ ಜನತೆಗೆ 2026ರ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

ಬೇವು ಬೆಲ್ಲ ಸವಿಯುತ್ತಾ ಕಹಿ ನೆನಪು ಮರೆಯತ್ತಾ ಸಿಹಿಯಾದ ಭರವಸೆಗಳನ್ನು ಸ್ವಾಗತಿಸೋಣ.. ನಾಡಿನ ಸಮಸ್ತ ಮಹಾ ಜನತೆಗೆ...