
ಹಾವೇರಿಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲು ಆಗ್ರಹ
ಹಾವೇರಿ:ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೊದಲ ಸಂಪುಟದಲ್ಲಿ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿತ್ತು, ಹಾವೇರಿ ಜಿಲ್ಲೆಗೆ ಈ ಬಾರಿ ಎರಡು ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಸಂಜಯಗಾಂಧಿ ಪು ಸಂಜೀವಣ್ಣನವರ ಕಾಂಗ್ರೆಸ್ ಪಕ್ಷದ ವರುಷ್ಠರನ್ನು ಒತ್ತಾಯಿಸಿದ್ದಾರೆ.೨೦೨೩ ರಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟದ ಪಟ್ಟಿಯಲ್ಲಿ ಹಾವೇರಿ ಶಾಸಕರಾದ ರುದ್ರಪ್ಪ ಲಮಾಣಿ ಹೆಸರು ಇತ್ತು. ಕಾರಣಾಂತರಗಳಿಂದ ಅವರ ಹೆಸರು ಕೈಬಿಟ್ಟಿದ್ದ ಹೈಕಮಾಂಡ್, ಮುಂದಿನ ಸಲ ಸಚಿವ ಸ್ಥಾನ ನೀಡುವ ಭರವಸೆ ನೀಡಿತ್ತು. ವಿಧಾನಸಭೆ ಉಪಸಭಾಪತಿ ಹುದ್ದೆ ನೀಡಿತ್ತು. ಜಿಲ್ಲೆಯ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಹಾವೇರಿ ಜಿಲ್ಲೆಯನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಮಾಡಿದ ಕೀರ್ತಿ ಈ ಇಬ್ಬರು ನಾಯಕರಿಗೆ ಸಲ್ಲುತ್ತದೆ. ಜಿಲ್ಲೆಯ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿದ್ದು, ಈ ಸಲ ಜಿಲ್ಲೆಗೆ ಎರಡು ಸಚಿವ ನೀಡಲೇಬೇಕು.
ಮುಂದೆ ಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ, ಎಪಿಎಂಸಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಹಾವೇರಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲೇಬೇಕು, ಹಾವೇರಿ ತಾಲೂಕಿನ ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ,ಬ್ಯಾಡಗಿ ಶಾಸಕರಾದ ಮಾಜಿ ಸಚಿವ ಬಸವರಾಜ ಶಿವಣ್ಣನವರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದಿರುವ ಅವರು ಒತ್ತಾಯ, ಈ ಬಾರಿ ಉಪಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಡಗೈ ಸಮುದಾಯದ ಅಗ್ರಗಣ್ಯ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕು ಎಂದು ಅವರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

