
ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್
ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾವೇರಿಯ ನೂತನ ಪತ್ರಿಕಾ ವಾಹನಕ್ಕೆ ಶನಿವಾರ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಸಕ್ಕರೆ, ಜವಳಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಚಾಲನೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯಿಂದ ಜಿಲ್ಲೆಗೆ ನೂತನ ಪತ್ರಿಕಾ ವಾಹನ ನೀಡುವುದು ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ನೂತನ ವಾಹನದಲ್ಲಿ ಸಚಿವರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಸಿಇಒ ದಲ್ಜಿತ್ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಮಾಧ್ಯಮ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕುಳಿತು ನಗರದಲ್ಲಿ ಸಂಚರಿಸಿದರು.

