ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ:   3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ- -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Date:

ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ:  
3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ- -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ:  (ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ):ಗಡಿನಾಡಿನ ಶಿಕ್ಷಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ.ಒದಗಿಸಲಿದೆ.  ಕನ್ನಡದ ಶಾಸ್ತ್ರೀಯ ಭಾμÉ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಉನ್ನತ ಮಟ್ಟದಲ್ಲಿ ಸಾಹಿತಿಗಳ ಸಮಿತಿ ರಚಿಸಲಾಗುವುದು.  ಸಮಿತಿ ಸೂಚಿಸುವ ಸಂಶೋಧನಾ ಕಾರ್ಯಗಳಿಗೆ ಬೇಕಾದ ಹಣವನ್ನು ಸರ್ಕಾರ ಒದಗಿಸಲಿದೆ. ಸಮ್ಮೇಳನದ ನೆನಪಿಗೆ ಹಾವೇರಿಯಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಕಸಾಪ ಭವನ ನಿರ್ಮಿಸಿ,  ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಡಿನಾಡಿನ ಶಿಕ್ಷಣ, ಆರೋಗ್ಯ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಈಗಾಗಲೆ 25 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ ಇನ್ನೂ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.  ಕನ್ನಡಕ್ಕಾಗಿ ಹೋರಾಡಿದ ಹೋರಾಟಗಾರರ ಮೇಲಿರುವ ಕಾಗ್ನಿಜಬಲ್ ಹೊರತುಪಡಿಸಿದ ಉಳಿದ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವಂತಹ ಅವಕಾಶಗಳನ್ನು ಪರಿಶೀಲಿಸಿ, ಕೇಸ್‍ಗಳನ್ನು ಹಿಂದೆ ಪಡೆಯಲು ಸರ್ಕಾರ ಬದ್ಧವಾಗಿದೆ .  2008 ರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾμÉಯ ಸ್ಥಾನಮಾನ ಪಡೆದಿದೆ.  ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ. ನೆರವು ದೊರೆತಿದೆ.  ಮೈಸೂರು ವಿವಿಯ ದೊಡ್ಡ  ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ.  ಶಾಸ್ತ್ರೀಯ ಭಾμÉ ಕುರಿತ ಸಂಶೋಧನೆ,  ಗ್ರಂಥಾಲಯ, ಚರ್ಚೆಗಳಿಗೆ ಮಾರ್ಗದರ್ಶನ ಮಾಡಲು ಸಮ್ಮೇಳನಾಧ್ಯಕ್ಷರ ಮಾರ್ಗದರ್ಶನದಲ್ಲಿ ನಾಡಿನ ಹಿರಿಯ ಸಾಹಿತಿಗಳ ಸಮಿತಿ ರಚಿಸಲಾಗುವುದು. ಸಮಿತಿ ಸೂಚಿಸುವ ಕಾರ್ಯಗಳಿಗೆ ಎಷ್ಟು ಅನುದಾನ ಬೇಕಾದರೂ ಸರ್ಕಾರ ಒದಗಿಸಲಿದೆ. ಹಾವೇರಿ ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕೆ 3 ಕೋಟಿ ರೂ.ಒದಗಿಸಲಾಗುವುದು.ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಅಲ್ಲೊಂದು ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಕಸಾಪ ರೂಪಿಸಬೇಕು ಎಂದರು.
ರಾಜ್ಯದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಿಗೆ ಪಿಂಚಣಿ ನೀಡುವ ರೀತಿ, ಗಡಿಯಾಚೆ  ಹೋರಾಡಿದ ಕನ್ನಡಿಗರಿಗೂ ಪಿಂಚಣಿ ನೀಡುವ ಕಾರ್ಯವನ್ನು ಸರ್ಕಾರ ಪ್ರಾರಂಭಿಸಲಿದೆ
ತಾಯಿ ಕನ್ನಡ ಭುವನೇಶ್ವರಿಯ ಒಡಲು ಶ್ರೀಮಂತವಾದುದು.  ಇಲ್ಲಿನ ಜ್ಞಾನ, ಸಾಹಿತ್ಯ, ತಂತ್ರಜ್ಞಾನ ಎಲ್ಲವೂ ಸಿರಿವಂತವಾಗಿದೆ. ಕನ್ನಡ ಭಾμÉಯಲ್ಲಿ ಸ್ಪಷ್ಟತೆ, ನಿಖರತೆ, ಪ್ರಖರತೆಗಳಿವೆ.  ಕನ್ನಡದ ಮನಸ್ಸುಗಳು ಸ್ವಚ್ಛ ಹಾಗೂ ಪಾರದರ್ಶಕವಾಗಿವೆ. ಬಹುತೇಕ ಸಾಹಿತ್ಯ ಹೃದಯದಿಂದ ಬಂದಿರುವ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಸತ್ಯದ ದರ್ಶನವಾಗಿದೆ.  ಈ ಭಾμÉಗೆ ಉಜ್ವಲ ಭವಿಷ್ಯವಿದೆ.  ಕಾಲ ಕಾಲಕ್ಕೆ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಸಾಗುತ್ತಿದೆ.  ಪಶ್ಚಿಮ ಘಟ್ಟದ ನದಿ ಸಂಪತ್ತಿನ ಸಂಪೂರ್ಣ ಪ್ರಯೋಜನ ಪಡೆದರೆ ನಾಡು ಇನ್ನಷ್ಟು ಶ್ರೀಮಂತವಾಗಲಿದೆ.  ಕಾನೂನು ತೊಡಕು ನಿವಾರಿಸಿಕೊಂಡು ಮಹದಾಯಿ ಯೋಜನೆ, ಕಳಸಾ ಬಂಡೂರಿ ಯೋಜನೆಯಾಗಿ ಅನುμÁ್ಠನವಾಗಲಿದೆ.  ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರಿಗೆ ಹೆಚ್ಚಿಸಲು ಶೀಘ್ರ ನ್ಯಾಯಮಂಡಳಿಯ ಅನುಮೋದನೆ ಸಿಗುವ ಭರವಸೆ ಇದೆ.  ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಮಧ್ಯ ಕರ್ನಾಟಕದ ಲಕ್ಷಾಂತರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.  ಮೇಕೆದಾಟು ಯೋಜನೆ ಜಾರಿಗೂ ಕೂಡ ಸರ್ವ ರೀತಿಯ ಪ್ರಯತ್ನವನ್ನು ನಮ್ಮ ಸರ್ಕಾರ ನಡೆಸಿದೆ.  ಎಲ್ಲಾ ಮಾತೃ ಭಾμÉಗಳಿಗೆ ಸಂವಿಧಾನದ ರಕ್ಷಣೆಯ ಅಗತ್ಯವಿದೆ.  ಪ್ರಾಥಮಿಕ ಹಂತದ ಶಾಲಾ ಶಿಕ್ಷಣ ಮಾತೃಭಾμÉಯಲ್ಲಿಯೇ ಆಗಬೇಕು ಎಂಬುದು ನ್ಯಾಯಾಲಯದಲ್ಲಿ ವಿಫಲವಾಗುತ್ತಿದೆ.  ಬರುವ ದಿನಗಳಲ್ಲಿ ಸಂವಿಧಾನ ರಕ್ಷಣೆ ಪಡೆಯಲು ಶ್ರಮಿಸಲಾಗುವುದು.  ಇದಕ್ಕಾಗಿ ಕೇಂದ್ರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು.  ಕರ್ನಾಟಕಕ್ಕೆ ಹೊರ ರಾಜ್ಯದ ಜನ ದೊಡ್ಡ ಪ್ರಮಾಣದಲ್ಲಿ ಬರುತ್ತಿದ್ದಾರೆ ಆದರೆ ಕನ್ನಡ ಕಲಿಯುತ್ತಿಲ್ಲ, ಈ ನಾಡಿನಲ್ಲಿ ನೆಲೆಸಲು ಇಚ್ಛಿಸುವವರು ಕಡ್ಡಾಯವಾಗಿ ಕನ್ನಡ ಕಲಿಯಲೇಬೇಕೆಂಬ ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ. ವಲಸೆ ಬಂದು ಇಲ್ಲಿ ನೆಲೆಸುವವರಿಗೆ ಕನ್ನಡ ಕಲಿಸಲು ವಿಶೇಷ ಕೋರ್ಸ್ ರೂಪಿಸಿ, ಜಾರಿಗೊಳಿಸುವ ಕಾರ್ಯಕ್ಕೆ ಆದಷ್ಟು ಬೇಗ ಕಾಯಕಲ್ಪ ನೀಡುತ್ತೇವೆ. ಕನ್ನಡಕ್ಕಾಗಿ ಗಡಿಯಾಚೆ ಹೋರಾಡಿದ  ಕನ್ನಡಿಗರಿಗೆ ಪಿಂಚಣಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಮಾತನಾಡಿ, ನೆಲ, ಜಲ, ಸಂಸ್ಕøತಿಯ ಅಭಿಮಾನದೊಂದಿಗೆ ನಾವು ಮುನ್ನಡೆಯಬೇಕು.  ಸ್ಥಳೀಯ ಭಾμÉಗಳ ಮಾಧ್ಯಮಗಳಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ದೊರೆಯಬೇಕು ಎಂಬ ಚರ್ಚೆಗಳು ನಡೆದಾಗ, ಕೆಲವರು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ)ಗೆ ವ್ಯತ್ಯಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದಾಗ, ಕೇಂದ್ರ ಗೃಹ ಸಚಿವರು ಆಂಗ್ಲಭಾμÉಯ ಬಳಕೆಯೇ ಇಲ್ಲದ ಕೊರಿಯಾ, ರಷ್ಯಾ ಮುಂತಾದ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ವಿವರಿಸಿದ್ದನ್ನು ಉದಾಹರಿಸಿ, ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾμÉಗೆ ಆದ್ಯತೆ ನೀಡಿರುವುದಾಗಿ ತಿಳಿಸಿದರು.
ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಮಾತನಾಡಿ, ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರತೆಯ ಕೇಂದ್ರ ಸ್ಥಾನವೇ ಮನುಷ್ಯತ್ವ,  ಮಾನವೀಯತೆಯಾಗಿದೆ.  ರಾಜಕೀಯದಲ್ಲಿ ಜಾತಿ, ಧರ್ಮ, ಭ್ರμÁ್ಟಚಾರ ಬೆರೆತು ಹೋಗಿದೆ.  ಸಾಹಿತಿಗಳು ರಾಜಕಾರಣಿಗಳಿಗೆ ಬುದ್ಧಿ ಹೇಳಿ, ತಿದ್ದುವ ಕಾರ್ಯ ಮಾಡಬೇಕು.  ಆದರೆ ವಿಧಾನಸೌಧವನ್ನು ಮೀರಿಸುವ ರೀತಿಯಲ್ಲಿ ಸಾಹಿತ್ಯ ಸಂಘಟನೆಗಳ ಚುನಾವಣೆಗಳು ನಡೆಯುತ್ತಿವೆ ಎಂಬುದನ್ನು ಅಲ್ಲಗಳೆಯಲಾಗದು.  ಒಂದು ರಾಜಕೀಯ ಪಕ್ಷ ನೇರವಾಗಿ ಒಂದು ಜಾತಿ, ಧರ್ಮದ ಮತಗಳು ನನಗೆ ಬೇಡ ಎಂದು ಹೇಳಬಹುದು, ಆದರೆ ರಾಜಕಾರಣಿಗಳಂತೆ ಸಾಹಿತಿಗಳು ವರ್ತಿಸಬಾರದು.  ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಧರ್ಮಗಳ ಸಾಹಿತಿಗಳನ್ನು ದೂರ ಇಟ್ಟಿರುವುದನ್ನು ಪ್ರತಿಭಟಿಸಿ, ಇಂದು ಬೆಂಗಳೂರಿನಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಕಸಾಪ  ಇಂತಹ ತಮ್ಮ ನಡೆಯನ್ನು ಸಮರ್ಥಿಸಿಕೊಳ್ಳಬಾರದು.  ನೆಲ-ಜಲದ ಸಮಸ್ಯೆಗಳ ಪರಿಹಾರಕ್ಕೆ ಸಮ್ಮೇಳನ ಪರಿಹಾರಗಳನ್ನು ಸೂಚಿಸಬೇಕು ಎಂದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸಮ್ಮೇಳನವು ಯಶಸ್ವಿಯಾಗಿ ನಡೆದಿರುವುದು ಸಂತಸದ ಸಂಗತಿಯಾಗಿದೆ.  ಮುಂದಿನ ಸಮ್ಮೇಳನಗಳಿಗೆ ಹಾವೇರಿಯ ಸಮ್ಮೇಳನ ಮಾದರಿಯಾಗುವಂತೆ ನಡೆದಿದೆ.  ಸಾಹಿತ್ಯ ಮಾತ್ರ ಈ ಭೂಮಿಯ ಮೇಲೆ ಸದಾಕಾಲ ಶಾಶ್ವತವಾಗಿ ಉಳಿಯಬಲ್ಲದು.  ನಮ್ಮತನವನ್ನು ಜಾಗೃತಗೊಳಿಸಿ, ಮುನ್ನಡೆಸುವ ಶಕ್ತಿ ಸಾಹಿತ್ಯಕ್ಕಿದೆ.  ನಾಡಿನ ಸಾಹಿತಿಗಳು ನಮ್ಮ ನೆಲ ಜಲದ ಶ್ರೀಮಂತಿಕೆ, ಹಿರಿಮೆ, ಗರಿಮೆಗಳನ್ನು ಜಗತ್ತಿಗೆ ಸಾರಿದ್ದಾರೆ.ಸಾಹಿತ್ಯವು ಮನುಷ್ಯರನ್ನು ಬೆಸೆದು ಎಲ್ಲರನ್ನೂ ಒಗ್ಗೂಡಿಸಬೇಕು.  ಭಾರತದ ಸಂಸ್ಕøತಿ,ಪರಂಪರೆಗೆ ಧಕ್ಕೆ ತರಲು ಯತ್ನಿಸುವವರಿಗೆ ಸಾಹಿತ್ಯ ಕ್ಷೇತ್ರ ಎಚ್ಚರಿಕೆ ನೀಡಬೇಕು ಎಂದರು.
ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಮಾತನಾಡಿ, ಸಂತ ಶಿಶುನಾಳ ಶರೀಫರ ನಾಡಿನಲ್ಲಿ ಸಹಬಾಳ್ವೆಯ ನೆಲದಲ್ಲಿ ಯಾವುದೇ ಧರ್ಮದವರಿಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ.ಈ ಸಮ್ಮೇಳನದಲ್ಲಿ 11 ಜನ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗಿದೆ.ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ, ಕನ್ನಡವೇ ಇಲ್ಲಿ ಪ್ರಧಾನ ಯಾವುದೇ ಧರ್ಮ,ಜಾತಿಯ ಸಮ್ಮೇಳನವಲ್ಲ ಎಂದು ಸ್ಪಷ್ಟೀಕರಣ ನೀಡಿದರು.
ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಸಮಾರೋಪ ಭಾಷಣ ಮಾಡಿದರು.  ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಆಶಯ ನುಡಿಗಳನ್ನಾಡಿದರು.
ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ,ಕೃಷಿ ಸಚಿವ ಬಿ.ಸಿ.ಪಾಟೀಲ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಸಂಸದ ಶಿವಕುಮಾರ ಉದಾಸಿ, ಮಾಜಿ ಸಂಸದರಾದ ಪ್ರೊ.ಐ.ಜಿ.ಸನದಿ, ಮಂಜುನಾಥ ಕುನ್ನೂರ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ವಿಧಾನಪರಿಷತ್ ಸದಸ್ಯ ಆರ್.ಶಂಕರ, ನಗರಸಭೆ ಅಧ್ಯಕ್ಷ  ಸಂಜೀವಕುಮಾರ ನೀರಲಗಿ,ಮಾಜಿ ಶಾಸಕ ಶಿವರಾಜ ಸಜ್ಜನರ,ಡಿ.ಎಂ.ಸಾಲಿ, ಬಸವರಾಜ ಶಿವಣ್ಣವರ,ರುದ್ರಪ್ಪ ಲಮಾಣಿ ,ಬಿ.ಹೆಚ್.ಬನ್ನಿಕೋಡ, ಯು.ಬಿ.ಬಣಕಾರ, ಸೋಮಣ್ಣ ಬೇವಿನಮರದ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ:  
3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ- -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ:  (ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ):ಗಡಿನಾಡಿನ ಶಿಕ್ಷಣ, ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ.ಒದಗಿಸಲಿದೆ.  ಕನ್ನಡದ ಶಾಸ್ತ್ರೀಯ ಭಾμÉ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಉನ್ನತ ಮಟ್ಟದಲ್ಲಿ ಸಾಹಿತಿಗಳ ಸಮಿತಿ ರಚಿಸಲಾಗುವುದು.  ಸಮಿತಿ ಸೂಚಿಸುವ ಸಂಶೋಧನಾ ಕಾರ್ಯಗಳಿಗೆ ಬೇಕಾದ ಹಣವನ್ನು ಸರ್ಕಾರ ಒದಗಿಸಲಿದೆ. ಸಮ್ಮೇಳನದ ನೆನಪಿಗೆ ಹಾವೇರಿಯಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಕಸಾಪ ಭವನ ನಿರ್ಮಿಸಿ,  ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಡಿನಾಡಿನ ಶಿಕ್ಷಣ, ಆರೋಗ್ಯ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಈಗಾಗಲೆ 25 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ ಇನ್ನೂ 100 ಕೋಟಿ ರೂ. ಅನುದಾನ ಒದಗಿಸಲಾಗುವುದು.  ಕನ್ನಡಕ್ಕಾಗಿ ಹೋರಾಡಿದ ಹೋರಾಟಗಾರರ ಮೇಲಿರುವ ಕಾಗ್ನಿಜಬಲ್ ಹೊರತುಪಡಿಸಿದ ಉಳಿದ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವಂತಹ ಅವಕಾಶಗಳನ್ನು ಪರಿಶೀಲಿಸಿ, ಕೇಸ್‍ಗಳನ್ನು ಹಿಂದೆ ಪಡೆಯಲು ಸರ್ಕಾರ ಬದ್ಧವಾಗಿದೆ .  2008 ರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾμÉಯ ಸ್ಥಾನಮಾನ ಪಡೆದಿದೆ.  ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ. ನೆರವು ದೊರೆತಿದೆ.  ಮೈಸೂರು ವಿವಿಯ ದೊಡ್ಡ  ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ.  ಶಾಸ್ತ್ರೀಯ ಭಾμÉ ಕುರಿತ ಸಂಶೋಧನೆ,  ಗ್ರಂಥಾಲಯ, ಚರ್ಚೆಗಳಿಗೆ ಮಾರ್ಗದರ್ಶನ ಮಾಡಲು ಸಮ್ಮೇಳನಾಧ್ಯಕ್ಷರ ಮಾರ್ಗದರ್ಶನದಲ್ಲಿ ನಾಡಿನ ಹಿರಿಯ ಸಾಹಿತಿಗಳ ಸಮಿತಿ ರಚಿಸಲಾಗುವುದು. ಸಮಿತಿ ಸೂಚಿಸುವ ಕಾರ್ಯಗಳಿಗೆ ಎಷ್ಟು ಅನುದಾನ ಬೇಕಾದರೂ ಸರ್ಕಾರ ಒದಗಿಸಲಿದೆ. ಹಾವೇರಿ ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕೆ 3 ಕೋಟಿ ರೂ.ಒದಗಿಸಲಾಗುವುದು.ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಅಲ್ಲೊಂದು ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಕಸಾಪ ರೂಪಿಸಬೇಕು ಎಂದರು.
ರಾಜ್ಯದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಿಗೆ ಪಿಂಚಣಿ ನೀಡುವ ರೀತಿ, ಗಡಿಯಾಚೆ  ಹೋರಾಡಿದ ಕನ್ನಡಿಗರಿಗೂ ಪಿಂಚಣಿ ನೀಡುವ ಕಾರ್ಯವನ್ನು ಸರ್ಕಾರ ಪ್ರಾರಂಭಿಸಲಿದೆ
ತಾಯಿ ಕನ್ನಡ ಭುವನೇಶ್ವರಿಯ ಒಡಲು ಶ್ರೀಮಂತವಾದುದು.  ಇಲ್ಲಿನ ಜ್ಞಾನ, ಸಾಹಿತ್ಯ, ತಂತ್ರಜ್ಞಾನ ಎಲ್ಲವೂ ಸಿರಿವಂತವಾಗಿದೆ. ಕನ್ನಡ ಭಾμÉಯಲ್ಲಿ ಸ್ಪಷ್ಟತೆ, ನಿಖರತೆ, ಪ್ರಖರತೆಗಳಿವೆ.  ಕನ್ನಡದ ಮನಸ್ಸುಗಳು ಸ್ವಚ್ಛ ಹಾಗೂ ಪಾರದರ್ಶಕವಾಗಿವೆ. ಬಹುತೇಕ ಸಾಹಿತ್ಯ ಹೃದಯದಿಂದ ಬಂದಿರುವ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಸತ್ಯದ ದರ್ಶನವಾಗಿದೆ.  ಈ ಭಾμÉಗೆ ಉಜ್ವಲ ಭವಿಷ್ಯವಿದೆ.  ಕಾಲ ಕಾಲಕ್ಕೆ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಸಾಗುತ್ತಿದೆ.  ಪಶ್ಚಿಮ ಘಟ್ಟದ ನದಿ ಸಂಪತ್ತಿನ ಸಂಪೂರ್ಣ ಪ್ರಯೋಜನ ಪಡೆದರೆ ನಾಡು ಇನ್ನಷ್ಟು ಶ್ರೀಮಂತವಾಗಲಿದೆ.  ಕಾನೂನು ತೊಡಕು ನಿವಾರಿಸಿಕೊಂಡು ಮಹದಾಯಿ ಯೋಜನೆ, ಕಳಸಾ ಬಂಡೂರಿ ಯೋಜನೆಯಾಗಿ ಅನುμÁ್ಠನವಾಗಲಿದೆ.  ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರಿಗೆ ಹೆಚ್ಚಿಸಲು ಶೀಘ್ರ ನ್ಯಾಯಮಂಡಳಿಯ ಅನುಮೋದನೆ ಸಿಗುವ ಭರವಸೆ ಇದೆ.  ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಮಧ್ಯ ಕರ್ನಾಟಕದ ಲಕ್ಷಾಂತರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.  ಮೇಕೆದಾಟು ಯೋಜನೆ ಜಾರಿಗೂ ಕೂಡ ಸರ್ವ ರೀತಿಯ ಪ್ರಯತ್ನವನ್ನು ನಮ್ಮ ಸರ್ಕಾರ ನಡೆಸಿದೆ.  ಎಲ್ಲಾ ಮಾತೃ ಭಾμÉಗಳಿಗೆ ಸಂವಿಧಾನದ ರಕ್ಷಣೆಯ ಅಗತ್ಯವಿದೆ.  ಪ್ರಾಥಮಿಕ ಹಂತದ ಶಾಲಾ ಶಿಕ್ಷಣ ಮಾತೃಭಾμÉಯಲ್ಲಿಯೇ ಆಗಬೇಕು ಎಂಬುದು ನ್ಯಾಯಾಲಯದಲ್ಲಿ ವಿಫಲವಾಗುತ್ತಿದೆ.  ಬರುವ ದಿನಗಳಲ್ಲಿ ಸಂವಿಧಾನ ರಕ್ಷಣೆ ಪಡೆಯಲು ಶ್ರಮಿಸಲಾಗುವುದು.  ಇದಕ್ಕಾಗಿ ಕೇಂದ್ರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು.  ಕರ್ನಾಟಕಕ್ಕೆ ಹೊರ ರಾಜ್ಯದ ಜನ ದೊಡ್ಡ ಪ್ರಮಾಣದಲ್ಲಿ ಬರುತ್ತಿದ್ದಾರೆ ಆದರೆ ಕನ್ನಡ ಕಲಿಯುತ್ತಿಲ್ಲ, ಈ ನಾಡಿನಲ್ಲಿ ನೆಲೆಸಲು ಇಚ್ಛಿಸುವವರು ಕಡ್ಡಾಯವಾಗಿ ಕನ್ನಡ ಕಲಿಯಲೇಬೇಕೆಂಬ ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ. ವಲಸೆ ಬಂದು ಇಲ್ಲಿ ನೆಲೆಸುವವರಿಗೆ ಕನ್ನಡ ಕಲಿಸಲು ವಿಶೇಷ ಕೋರ್ಸ್ ರೂಪಿಸಿ, ಜಾರಿಗೊಳಿಸುವ ಕಾರ್ಯಕ್ಕೆ ಆದಷ್ಟು ಬೇಗ ಕಾಯಕಲ್ಪ ನೀಡುತ್ತೇವೆ. ಕನ್ನಡಕ್ಕಾಗಿ ಗಡಿಯಾಚೆ ಹೋರಾಡಿದ  ಕನ್ನಡಿಗರಿಗೆ ಪಿಂಚಣಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಮಾತನಾಡಿ, ನೆಲ, ಜಲ, ಸಂಸ್ಕøತಿಯ ಅಭಿಮಾನದೊಂದಿಗೆ ನಾವು ಮುನ್ನಡೆಯಬೇಕು.  ಸ್ಥಳೀಯ ಭಾμÉಗಳ ಮಾಧ್ಯಮಗಳಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ದೊರೆಯಬೇಕು ಎಂಬ ಚರ್ಚೆಗಳು ನಡೆದಾಗ, ಕೆಲವರು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ)ಗೆ ವ್ಯತ್ಯಯವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದಾಗ, ಕೇಂದ್ರ ಗೃಹ ಸಚಿವರು ಆಂಗ್ಲಭಾμÉಯ ಬಳಕೆಯೇ ಇಲ್ಲದ ಕೊರಿಯಾ, ರಷ್ಯಾ ಮುಂತಾದ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ವಿವರಿಸಿದ್ದನ್ನು ಉದಾಹರಿಸಿ, ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾμÉಗೆ ಆದ್ಯತೆ ನೀಡಿರುವುದಾಗಿ ತಿಳಿಸಿದರು.
ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಮಾತನಾಡಿ, ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರತೆಯ ಕೇಂದ್ರ ಸ್ಥಾನವೇ ಮನುಷ್ಯತ್ವ,  ಮಾನವೀಯತೆಯಾಗಿದೆ.  ರಾಜಕೀಯದಲ್ಲಿ ಜಾತಿ, ಧರ್ಮ, ಭ್ರμÁ್ಟಚಾರ ಬೆರೆತು ಹೋಗಿದೆ.  ಸಾಹಿತಿಗಳು ರಾಜಕಾರಣಿಗಳಿಗೆ ಬುದ್ಧಿ ಹೇಳಿ, ತಿದ್ದುವ ಕಾರ್ಯ ಮಾಡಬೇಕು.  ಆದರೆ ವಿಧಾನಸೌಧವನ್ನು ಮೀರಿಸುವ ರೀತಿಯಲ್ಲಿ ಸಾಹಿತ್ಯ ಸಂಘಟನೆಗಳ ಚುನಾವಣೆಗಳು ನಡೆಯುತ್ತಿವೆ ಎಂಬುದನ್ನು ಅಲ್ಲಗಳೆಯಲಾಗದು.  ಒಂದು ರಾಜಕೀಯ ಪಕ್ಷ ನೇರವಾಗಿ ಒಂದು ಜಾತಿ, ಧರ್ಮದ ಮತಗಳು ನನಗೆ ಬೇಡ ಎಂದು ಹೇಳಬಹುದು, ಆದರೆ ರಾಜಕಾರಣಿಗಳಂತೆ ಸಾಹಿತಿಗಳು ವರ್ತಿಸಬಾರದು.  ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಧರ್ಮಗಳ ಸಾಹಿತಿಗಳನ್ನು ದೂರ ಇಟ್ಟಿರುವುದನ್ನು ಪ್ರತಿಭಟಿಸಿ, ಇಂದು ಬೆಂಗಳೂರಿನಲ್ಲಿ ಜನಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಕಸಾಪ  ಇಂತಹ ತಮ್ಮ ನಡೆಯನ್ನು ಸಮರ್ಥಿಸಿಕೊಳ್ಳಬಾರದು.  ನೆಲ-ಜಲದ ಸಮಸ್ಯೆಗಳ ಪರಿಹಾರಕ್ಕೆ ಸಮ್ಮೇಳನ ಪರಿಹಾರಗಳನ್ನು ಸೂಚಿಸಬೇಕು ಎಂದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸಮ್ಮೇಳನವು ಯಶಸ್ವಿಯಾಗಿ ನಡೆದಿರುವುದು ಸಂತಸದ ಸಂಗತಿಯಾಗಿದೆ.  ಮುಂದಿನ ಸಮ್ಮೇಳನಗಳಿಗೆ ಹಾವೇರಿಯ ಸಮ್ಮೇಳನ ಮಾದರಿಯಾಗುವಂತೆ ನಡೆದಿದೆ.  ಸಾಹಿತ್ಯ ಮಾತ್ರ ಈ ಭೂಮಿಯ ಮೇಲೆ ಸದಾಕಾಲ ಶಾಶ್ವತವಾಗಿ ಉಳಿಯಬಲ್ಲದು.  ನಮ್ಮತನವನ್ನು ಜಾಗೃತಗೊಳಿಸಿ, ಮುನ್ನಡೆಸುವ ಶಕ್ತಿ ಸಾಹಿತ್ಯಕ್ಕಿದೆ.  ನಾಡಿನ ಸಾಹಿತಿಗಳು ನಮ್ಮ ನೆಲ ಜಲದ ಶ್ರೀಮಂತಿಕೆ, ಹಿರಿಮೆ, ಗರಿಮೆಗಳನ್ನು ಜಗತ್ತಿಗೆ ಸಾರಿದ್ದಾರೆ.ಸಾಹಿತ್ಯವು ಮನುಷ್ಯರನ್ನು ಬೆಸೆದು ಎಲ್ಲರನ್ನೂ ಒಗ್ಗೂಡಿಸಬೇಕು.  ಭಾರತದ ಸಂಸ್ಕøತಿ,ಪರಂಪರೆಗೆ ಧಕ್ಕೆ ತರಲು ಯತ್ನಿಸುವವರಿಗೆ ಸಾಹಿತ್ಯ ಕ್ಷೇತ್ರ ಎಚ್ಚರಿಕೆ ನೀಡಬೇಕು ಎಂದರು.
ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಮಾತನಾಡಿ, ಸಂತ ಶಿಶುನಾಳ ಶರೀಫರ ನಾಡಿನಲ್ಲಿ ಸಹಬಾಳ್ವೆಯ ನೆಲದಲ್ಲಿ ಯಾವುದೇ ಧರ್ಮದವರಿಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ.ಈ ಸಮ್ಮೇಳನದಲ್ಲಿ 11 ಜನ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗಿದೆ.ಇಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ, ಕನ್ನಡವೇ ಇಲ್ಲಿ ಪ್ರಧಾನ ಯಾವುದೇ ಧರ್ಮ,ಜಾತಿಯ ಸಮ್ಮೇಳನವಲ್ಲ ಎಂದು ಸ್ಪಷ್ಟೀಕರಣ ನೀಡಿದರು.
ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಸಮಾರೋಪ ಭಾಷಣ ಮಾಡಿದರು.  ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ್ ಆಶಯ ನುಡಿಗಳನ್ನಾಡಿದರು.
ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ,ಕೃಷಿ ಸಚಿವ ಬಿ.ಸಿ.ಪಾಟೀಲ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, ಸಂಸದ ಶಿವಕುಮಾರ ಉದಾಸಿ, ಮಾಜಿ ಸಂಸದರಾದ ಪ್ರೊ.ಐ.ಜಿ.ಸನದಿ, ಮಂಜುನಾಥ ಕುನ್ನೂರ, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ವಿಧಾನಪರಿಷತ್ ಸದಸ್ಯ ಆರ್.ಶಂಕರ, ನಗರಸಭೆ ಅಧ್ಯಕ್ಷ  ಸಂಜೀವಕುಮಾರ ನೀರಲಗಿ,ಮಾಜಿ ಶಾಸಕ ಶಿವರಾಜ ಸಜ್ಜನರ,ಡಿ.ಎಂ.ಸಾಲಿ, ಬಸವರಾಜ ಶಿವಣ್ಣವರ,ರುದ್ರಪ್ಪ ಲಮಾಣಿ ,ಬಿ.ಹೆಚ್.ಬನ್ನಿಕೋಡ, ಯು.ಬಿ.ಬಣಕಾರ, ಸೋಮಣ್ಣ ಬೇವಿನಮರದ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...