ಹಿರಿಯಪತ್ರಕರ್ತ ಪ್ರಕಾಶ ಜೋಶಿ ಸೇರಿದಂತೆ ಜಿಲ್ಲೆಯ ನಾಲ್ವರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ
ಹಾವೇರಿ:ಪತ್ರಕರ್ತರಿಗೆ ನೀಡಲಾಗವ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳನ್ನು ಗರುವಾರ ಪ್ರಕಟಿಸಲಾಗಿದ್ದು, ಹಾವೇರಿಯ ಹಿರಿಯ ಪತ್ರಕರ್ತ ಪ್ರಕಾಶ ಜೋಶಿ ಸೇರಿದಂತೆ ಜಿಲ್ಲೆಯ ನಾಲ್ವರು ಪತ್ರಕರ್ತರಿಗ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಕಾಶ ಜೋಶಿ ಹಾವೇರಿ (ಸಂಯುಕ್ತ ಕರ್ನಾಟಕ), ನಾಗರಾಜ ಕುರವತ್ತೇರ ಹಾವೇರಿ(ಸಂಯಕ್ತ ಕರ್ನಾಟಕ) ಜಿಲ್ಲಾ ಕಾನಿಪ ಅಧ್ಯಕ್ಷರ, ಪರಶುರಾಮ ಸತ್ಯಪ್ಪನವರ ಶಿಗ್ಗಾವಿ(ವಿಜಯ ಕರ್ನಾಟಕ) ಹಾಗೂ ಆನಂದ ಮತ್ತಿಗಟ್ಟಿ, ಸವಣೂರು (ವಿಜಯವಾಣಿ)ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟಿಸಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಲಾಗಿದೆ. ನಾಲ್ಕು ವರ್ಷಗಳ ಸಾಲಿನ (೨೦೧೯, ೨೦೨೦, ೨೦೨೧, ೨೦೨೨ನೇ ಸಾಲು) ನಾಡಿನ ವಿವಿಧ ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿ?ಗೆ ಆಯ್ಕೆ ಮಾಡಲಾಗಿದೆ.
ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ ೫೦,೦೦೦ ರೂ. ನಗದು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ ೨೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ ೧೨೪ ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಒಟ್ಟು ೨೧ ಮಂದಿ ಪತ್ರಕರ್ತರು ದತ್ತಿ ಪ್ರಶಸ್ತಿ?ಗೆ ಆಯ್ಕೆಯಾಗಿದ್ದಾರೆ.
ನಾಲ್ಕು ವರ್ಷಗಳ ದತ್ತಿ ಪ್ರಶಸ್ತಿಗಳು: ಆಂದೋಲನ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ ಆಂದೋಲನ ಪ್ರಶಸ್ತಿ, ಅಭಿಮಾನಿ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅಭಿಮಾನಿ ಮತ್ತು ಅರಗಿಣಿ ಪ್ರಶಸ್ತಿಗಳು, ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ಮೈಸೂರು ದಿಗಂತ ಪ್ರಶಸ್ತಿ ಹಾಗೂ ಪತ್ರಕರ್ತ ಕೆ.ಶಿವಕುಮಾರ್ ಸ್ಥಾಪಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿ ಗೂ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳ ಮೊತ್ತ ತಲಾ ೧೦,೦೦೦ ರೂ. ನಗದು ಬಹುಮಾನ ಒಳಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರು ಪ್ರಶಸ್ತಿ ಪುರಸ್ಕೃತರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.