
ಒಳಮೀಸಲಾತಿ ಇಲ್ಲದೆ ಉದ್ಯೋಗ ನೇಮಕಾತಿಗೆ ಹೊರಡಿಸಿರುವ ಸುತ್ತೋಲೆ ಕೂಡಲೇ ಹಿಂಪಡೆಯಲು ಆಗ್ರಹ
ಹಾವೇರಿ:ಒಳಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಬುಧವಾರ ಪ್ರತಿಭಟಿಸಿ ಅಪರಜಿಲ್ಲಾಧಿಕಾರಿಗಳಾದ ಡಾ.ನಾಗರಾಜ ಎಲ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ ೩೫ ವ?ಗಳಿಂದ ನಿರಂತರ ಹೋರಾಟ ನಡೆಸಿದ್ದೇವೆ. ಸುಪ್ರೀಂ ಕೋರ್ಟ್ ಪರಿಶಿ? ಮೀಸಲಾತಿ ವರ್ಗೀಕರಿಸಲು ರಾಜ್ಯಕ್ಕೆ ಅವಕಾಶ ನೀಡಿತು.ರಾಜ್ಯ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿ ವರದಿ ಪ
ಡೆದು ಸಚಿವ ಸಂಪುಟದಲ್ಲಿ ಅನುಮೋಧಿಸಿತು. ಆ ನಂತರ ವಿಧಾನ ಸಭೆ ಮತ್ತು ವಿಧಾನ ಪರಿ?ತ್ತಿನಲ್ಲಿ ಮಸೂದೆ ಅಂಗೀಕರಿಸಿ ರಾಜ್ಯಪಾಲರ ಸಹಿ ನಂತರ ವಿಧೇಯಕವಾಗಿದೆ. ಕಾಂಗ್ರೆಸ್ ಸರ್ಕಾರ ಆರಂಭದಿಂದಲು ಒಳಮೀಸಲಾತಿ ವಿರೋಧಿಯಾಗಿದೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ವಿರೋಧಿಗಳ ರಾಜಕೀಯ ಒತ್ತಡದ ಪ್ರಭಾವಕ್ಕೆ ಒಳಗಾಗಿದ್ದಾರೆ. ಒಳಮೀಸಲಾತಿ ಜಾರಿ ಮಾಡಲು ವಿಶೇ? ಸಚಿವ ಸಂಪುಟದ ದೀರ್ಘ ಚರ್ಚೆಯ ಅಗತ್ಯವಿಲ್ಲ ಯಾವ ಕೋರ್ಟ್ ತಡೆಯಾಜ್ಞೆ ಹಾಗೂ ತಾಂತ್ರಿಕ ಆಡಚಣೆಗಳಿಲ್ಲ.ಅಡಚಣೆ ಇರುವುದು ಸರ್ಕಾರದಲ್ಲಿ, ಆದ್ದರಿಂದ ಮುಖ್ಯಮಂತ್ರಿಗಳು ಸಮರ್ಥ ಹಾಗೂ ನಿ?ರ ನಿರ್ಧಾರ ಮಾಡಬೇಕಿದೆ. ಹಲವಾರು ಹಕ್ಕೊತ್ತಾಯಗಳನ್ನು ಇದೇ ಅವಧಿಯಲ್ಲಿ ಒತ್ತಾಯಿಸಲಾಯಿತು.
ಒಳಮೀಸಲಾತಿ ಇಲ್ಲದೆ ೫೬.೪೩೨ ಉದ್ಯೋಗ ನೇಮಕಾತಿಗೆ ಹೊರಡಿಸಿರುವ ದಿನಾಂಕ ೨೭-೦೨-೨೦೨೬ರ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಒಳ ಮೀಸಲಾತಿ ಅಳವಡಿಸಿ, ಶೇ.೧೫ ರ? ಮೀಸಲಾತಿಯಲ್ಲಿ ಉದ್ಯೋಗ ನೇಮಕಾತಿ ಮಾಡಲಿ, ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿಸಿ ಉದ್ಯೋಗ ನೇಮಕಾತಿ ಮಾಡುವ ಪ್ರಯತ್ನವನ್ನು ಕೈಬಿಡಬೇಕು, ಅಲೆಮಾರಿ, ಅರೆ ಅಲೆಮಾರಿ ಸಮುದಾಯ ಸಮುದಾಯಗಳಿಗೆ ಶೇ ೧ ರ? ಪ್ರತ್ಯೇಕ ಮೀಸಲಾತಿ ನೀಡಲಿ, ಪರಿಶಿ? ಜಾತಿಗೆ ಶೇ.೧೭ ಮತ್ತು ಪರಿಶಿ? ವರ್ಗಕ್ಕೆ ಶೇ.೭. ಒಟ್ಟು ಶೇ.೫೬ ಮೀಸಲಾತಿಯನ್ನು ಸಂವಿಧಾನದ ೯ನೇ ಅನುಸೂಚಿಯಲ್ಲಿ ಸೇರಿಸಿ ಮೀಸಲಾತಿ ಹೆಚ್ಚಿಸಬೇಕು, ಉದ್ಯೋಗ ನೇಮಕಾತಿ, ನೇರ ನೇಮಕಾತಿ, ಬ್ಯಾಕ್ಲಾಗ್,ಬಡ್ತಿ, ಮುಂಬಡ್ತಿ, ಒಳಗುತ್ತಿಗೆ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಆರ್ಥಿಕ ಸೌಲಭ್ಯ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಕಲ್ಪಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಮನವಿಯನ್ನು ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಉಡಚಪ್ಪ ಮಾಳಗಿ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಜಗದೀಶ ಹರಿಜನ, ಶಿವಲಿಂಗಪ್ಪ ನಿಂಗಪ್ಪನವರ, ಜಿಲ್ಲಾ ಮುಖಂಡರಾದ ಮಹೇಶಪ್ಪ ಶಾಕಾರ, ರಾಜಪ್ಪ ಸೋಮನಕಟ್ಟಿ, ವೆಂಕಟೇಶ ಹಾವನೂರ, ಪುನೀತ ಹಾವನೂರ, ಯಶವಂತ ಹಾವನೂರ, ನಿಂಗಪ್ಪ ಸೇರಿದಂತೆ ಪದಾಧಿಕಾರಿಗಳು ಅಪರ ಜಿಲ್ಲಾಧಕಾರಿಗಳಿಗೆ ಸಲ್ಲಿಸಿದರು..

