ಕರುನಾಡ ಕದನಕ್ಕೆ ದಿನಾಂಕ ನಿಗದಿ, ಮೇ.೧೦ರಂದು ಮತದಾನ, ಮೇ. ೧೩ಕ್ಕೆ ಫಲಿತಾಂಶ: ಚುನಾವಣಾ ಆಯೋಗ ಪ್ರಕಟ
ದೆಹಲಿ: ಕರ್ನಾಟಕದ ೨೨೪ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದೆ. ಮೇ. ೧೦ರಂದು ಮತದಾನ, ೧೩ಕ್ಕೆ ಫಲಿತಾಂಶ ದಿನಾಂಕ ನಿಗದಿಪಡಿಸಳಾಗಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಏಪ್ರಿಲ್ ೧೩ ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ ೨೦ ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ ೨೪ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ ೧೦ ರ ಬುಧವಾರ ಮತದಾನ ನಡೆಯಲಿದ್ದು, ಮೇ ೧೫ ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬುಧವಾರ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚುನಾವಣಯ ವಿವರ ನೀಡಿದ ಅವರು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ೧೦ ರಂದು ಮತದಾನ ನಡೆಯಲಿದ್ದು, ಮೇ ೧೩ ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ೫ ಕೋಟಿ ೨೧ ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು ೨ ಕೋಟಿ ೬೨ ಲಕ್ಷ ಇದ್ದರೆ, ೨ ಕೋಟಿ ೫೯ ಲಕ್ಷ ಮಹಿಳಾ ಮತದಾರರು ಇದ್ದಾರೆ. ಮೊದಲ ಬಾರಿಗೆ ೮೦ ವರ್ಷ ವಯಸ್ಸಿನ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸುಗಮ ಮತದಾನಕ್ಕಾಗಿ ೫೮,೨೮೨ ಒಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾ ಆಯುಕ್ತರು ತಿಳಿಸಿದರು.
`ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಜಾಗೃತಿ ಅಭಿಯಾನದ ಅಂಗವಾಗಿ ಹಲವಾರು ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕಳೆದ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿತ್ತು. ಐಟಿ ಹಬ್ ಆಗಿರುವ ಬೆಂಗಳೂರಿನಲ್ಲಿ ಹಲವಾರು ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಭ್ಯರ್ಥಿಗಳ ಪೂರ್ಣ ಮಾಹಿತಿಯುಳ್ಳ ಪ್ರಮಾಣಪತ್ರ ವೆಬ್ಸೈಟ್ನಲ್ಲಿ ಲಭ್ಯವಿರಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.
ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ ನೀಡಲು ಸಂಗ್ರಹಿಸಲಾಗಿದ್ದ ವಸ್ತುಗಳು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದರು. ವಿಧಾನಸಭೆಯ ೨೨೪ ಕ್ಷೇತ್ರಗಳಲ್ಲಿ ೩೬ ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಿದ್ದರೆ, ೧೫ ಪರಿಶಿಷ್ಟ ಪಂಗಡ, ೧೭೩ ಸಾಮಾನ್ಯ ಕ್ಷೇತ್ರಗಳಾಗಿವೆ.
ಚುನಾವಣೆ ಆಯೋಗ ಪ್ರಕಟಿಸಿದ ವೇಳಾಪಟ್ಟಿ
ಅಧಿಸೂಚನೆ ಪ್ರಕಟ: ಏಪ್ರಿಲ್ ೧೩
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ ೨೦
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಏಪ್ರಿಲ್ ೨೪
ಮತದಾನ ದಿನಾಂಕ: ಮೇ ೧೦
ಫಲಿತಾಂಶ : ಮೇ. ೧೩ಕ್ಕೆ
ಕರುನಾಡ ಕದನಕ್ಕೆ ದಿನಾಂಕ ನಿಗದಿ, ಮೇ.೧೦ರಂದು ಮತದಾನ, ಮೇ. ೧೩ಕ್ಕೆ ಫಲಿತಾಂಶ: ಚುನಾವಣಾ ಆಯೋಗ ಪ್ರಕಟ
Date:
ಕರುನಾಡ ಕದನಕ್ಕೆ ದಿನಾಂಕ ನಿಗದಿ, ಮೇ.೧೦ರಂದು ಮತದಾನ, ಮೇ. ೧೩ಕ್ಕೆ ಫಲಿತಾಂಶ: ಚುನಾವಣಾ ಆಯೋಗ ಪ್ರಕಟ
ದೆಹಲಿ: ಕರ್ನಾಟಕದ ೨೨೪ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದೆ. ಮೇ. ೧೦ರಂದು ಮತದಾನ, ೧೩ಕ್ಕೆ ಫಲಿತಾಂಶ ದಿನಾಂಕ ನಿಗದಿಪಡಿಸಳಾಗಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಏಪ್ರಿಲ್ ೧೩ ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ ೨೦ ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ ೨೪ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ ೧೦ ರ ಬುಧವಾರ ಮತದಾನ ನಡೆಯಲಿದ್ದು, ಮೇ ೧೫ ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬುಧವಾರ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚುನಾವಣಯ ವಿವರ ನೀಡಿದ ಅವರು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ೧೦ ರಂದು ಮತದಾನ ನಡೆಯಲಿದ್ದು, ಮೇ ೧೩ ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ೫ ಕೋಟಿ ೨೧ ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು ೨ ಕೋಟಿ ೬೨ ಲಕ್ಷ ಇದ್ದರೆ, ೨ ಕೋಟಿ ೫೯ ಲಕ್ಷ ಮಹಿಳಾ ಮತದಾರರು ಇದ್ದಾರೆ. ಮೊದಲ ಬಾರಿಗೆ ೮೦ ವರ್ಷ ವಯಸ್ಸಿನ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸುಗಮ ಮತದಾನಕ್ಕಾಗಿ ೫೮,೨೮೨ ಒಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾ ಆಯುಕ್ತರು ತಿಳಿಸಿದರು.
`ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಜಾಗೃತಿ ಅಭಿಯಾನದ ಅಂಗವಾಗಿ ಹಲವಾರು ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕಳೆದ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿತ್ತು. ಐಟಿ ಹಬ್ ಆಗಿರುವ ಬೆಂಗಳೂರಿನಲ್ಲಿ ಹಲವಾರು ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಭ್ಯರ್ಥಿಗಳ ಪೂರ್ಣ ಮಾಹಿತಿಯುಳ್ಳ ಪ್ರಮಾಣಪತ್ರ ವೆಬ್ಸೈಟ್ನಲ್ಲಿ ಲಭ್ಯವಿರಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.
ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ ನೀಡಲು ಸಂಗ್ರಹಿಸಲಾಗಿದ್ದ ವಸ್ತುಗಳು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದರು. ವಿಧಾನಸಭೆಯ ೨೨೪ ಕ್ಷೇತ್ರಗಳಲ್ಲಿ ೩೬ ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಿದ್ದರೆ, ೧೫ ಪರಿಶಿಷ್ಟ ಪಂಗಡ, ೧೭೩ ಸಾಮಾನ್ಯ ಕ್ಷೇತ್ರಗಳಾಗಿವೆ.
ಚುನಾವಣೆ ಆಯೋಗ ಪ್ರಕಟಿಸಿದ ವೇಳಾಪಟ್ಟಿ
ಅಧಿಸೂಚನೆ ಪ್ರಕಟ: ಏಪ್ರಿಲ್ ೧೩
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ ೨೦
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಏಪ್ರಿಲ್ ೨೪
ಮತದಾನ ದಿನಾಂಕ: ಮೇ ೧೦
ಫಲಿತಾಂಶ : ಮೇ. ೧೩ಕ್ಕೆ