ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ,
ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟೀಸ್ ನೀಡಲು ಸಚಿವ ಶಿವಾನಂದ ಪಾಟೀಲ ಸೂಚನೆ
ಹಾವೇರಿ: ಕುಡಿಯುವ ನೀರು ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಮಾಡಬೇಕು. ಕಾಮಗಾರಿಗಳನ್ನು ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟೀಸ್ ನೀಡಿ ಎಂದು ಅಧಿಕಾರಿಗಳಿಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೆöÊಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವ್ದಾರಿ ಹೇಳಿಕೆ ಸರಿಯಲ್ಲ. ನಾಲ್ಕು ತಿಂಗಳಿಗೊಮ್ಮೆ ಕೆಡಿಪಿ ಸಭೆ ಮಾಡಲಾಗುತ್ತದೆ, ನಾನು ನಿಮ್ಮ ಕಥೆ ಕೇಳು ಬಂದಿಲ್ಲ, ಯೋಜನೆಗಳ ಸಮರ್ಪಕ ಅನುಷ್ಠಾನವಾಗಬೇಕು. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಾವೇರಿ ನಗರಕ್ಕೆ ಪ್ರತಿದಿನ ಇಲ್ಲವಾದರೂ ಐದು ದಿನಗಳಿಗೆ ನೀರು ಪೂರೈಕೆ ಮಾಡಲು ಹಿಂದಿನ ಸಭೆಯಲ್ಲಿ ಹೇಳಲಾಗಿತ್ತು. ಅದನ್ನು ಸರಿಯಾಗಿ ಮಾಡಿಲ್ಲ. ಜೊತೆಗೆ ೨೪*೭ ಕಾಮಗಾರಿ ಪರಿಶೀಲಸಿದದೇ ರೂ.೩೨ ಕೋಟಿ ಗುತ್ತಿಗೆದಾರನಿಗೆ ಪಾವತಿಸಲಾಗಿದೆ. ಅಧಿಕಾಗಳು ಮಲಕೊಂಡಿದ್ರಾ?, ಅಧಿಕಾರಿಗಳು ಅಥವಾ ಸ್ಥಳೀಯ ಶಾಸಕರಾದರೂ ಪರಿಶೀಲನೆ ಮಾಡಬೇಕು. ಅದು ಯಾವುದೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಶಿಸ್ತು ಕ್ರಮಕ್ಕೆ ಸೂಚನೆ: ಯೋಜನೆ ಅನುಷ್ಠಾನದಲ್ಲಿ ನಗರಸಭೆ ಪೌರಾಯುಕ್ತ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ಜವಾಬ್ದಾರಿ ಇದೆ. ಯರ್ಯಾರು ಬಿಲ್ಲಿಗೆ ಸಹಿ ಮಾಡಿದ್ದಾರೆ ಎಂದು ವಿಚಾರಣೆ ನಡೆಸಿ, ಅವರ ಮೇಲೆ ಸೂಕ್ತ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದಲ್ಲಿರುವ ಬೋರವೆಲ್ಗಳ ನೀರಿನ ಮಟ್ಟ ಪರಿಶೀಲಿಸಿ, ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಾರಣ ಹೇಳುವುದು ಬಿಟ್ಟು ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಾಕೀತು ಮಾಡಿದರು.
ಅನುದಾನ ಕೊರತೆ ಇಲ್ಲ: ಅಮೃತ ಯೋಜನೆಯಡಿ ರೂ.೧೦೨ ಕೋಟಿ ಅನುದಾನ ಮಂಜೂರಾಗಿದ್ದು, ಅನುದಾನದ ಕೊರತೆ ಇಲ್ಲ. ಹಾವೇರಿ ಮತ್ತು ಗುತ್ತಲ ಪೈಪ್ಲೈನ್ ಮಾಡದ ಹಾಗೆ ರೂ.೮ ಕೋಟಿ ಪಾವತಿ ಮಾಡಲಾಗಿದೆ. ವರದಿಯಲ್ಲಿ ಆರ್ಥಿಕ ಮತ್ತು ಬೌತಿಕ ಮಾಹಿತಿ ನೀಡಿಲ್ಲ ಎಂದು ಕಾರ್ಯನಿರ್ವಾಹಕ ಅಭಿಯಂತರರನ್ನು ಪ್ರಶ್ನಿಸಿದರು. ಶಿಗ್ಗಾಂವ ಹಾಗೂ ಬಂಕಾಪುರ ಪಟ್ಟಣಗಳಲ್ಲಿ ಮನೆಗಳಿಗೆ ನೀರಿನ ಸಂಪರ್ಕ ನೀಡಿಲ್ಲ. ಮೊದಲು ವೋಹರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಳ್ಳಿ ಎಂದು ಸೂಚನೆ ನೀಡಿದರು.
ಪ್ರಗತಿಯಲ್ಲಿರುವ ಕಾಮಗಾರಿಗಳ ವಿಳಂಬದ ಕುರಿತು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಚೇರಮನ್ಗೆ ಪತ್ರಬರೆಯುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪೂರ್ಣ ಮಾಹಿತಿ: ಸಣ್ಣ ನೀರಾವರಿ ಇಲಾಖೆಯಿಂದ ನೀಡಿದ ವರದಿ ಅಪೂರ್ಣವಾಗಿದ್ದು, ತಾಲೂಕುವಾರು ಮಾಹಿತಿ ಇಲ್ಲ, ರೂ. ೧೦೫ ಕೋಟಿ ಹಾನಗಲ್ ತಾಲೂಕು ಸಮ್ಮಸಗಿ ಏತ ನೀರಾವರಿ ಯೋಜನೆ ಮಾಹಿತಿ ನೀಡಿಲ್ಲ. ಸರಿಯಾದ ಮಾಹಿತಿ ಇಲ್ಲ ಹೇಗೆ ಪರಿಶೀಲನೆ ಮಾಡಬೇಕು. ಮುಂದಿನ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಬರದಿದ್ದರೆ ಅಮಾನತ್ ಮಾಡಲಾಗುವುದು ಎಚ್ಚರಿಕೆ ನೀಡಿದರು.
ಕಾರ್ಯನಿರ್ವಾಹಕ ಇಂಜನೀಯರ್ ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿದ್ದಾರೆ ಎಂದು ಉತ್ತರಿಸಿದಾಗ, ಕಾಮಗಾರಿ ವಿಳಂಬಮಾಡುವ ಗುತ್ತಿಗೆದಾರನಿಗೆ ನೋಟಿಸ್ ನೀಡಿ ಜೊತೆಗೆ ಬ್ಲಾö್ಯಕ್ ಲಿಸ್ಟ್ ಹಾಕಿ ಎಂದು ಸೂಚನೆ ನೀಡಿದರು.
ವ್ಯಾಪಕ ಪ್ರಚಾರಕ್ಕೆ ಸೂಚನೆ: ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲಿಸಿದ ಸಚಿವರು, ಸೂರ್ಯ ಘರ್ ಯೋಜನೆ ಕುರಿತು ಕರಪತ್ರ ನೀಡಿ ಫೋಟೋ ತೆಗೆಸಿಕೊಂಡರೆ ಆಗಲ್ಲ್ಲ, ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಅವರು ಮಾತನಾಡಿ, ಬ್ಯಾಡಗಿ ಪಟ್ಟಣಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಪೂರೈಕೆಯಾಗುವ ನೀರನ್ನು ಮಾರ್ಗ ಮಧ್ಯದಲ್ಲಿ ಹೂಲಿಹಳ್ಳಿ, ಅಸುಂಡಿ ಹಾಗೂ ಕದರಮಂಡಲಗಿಯಲ್ಲಿ ತಮಗೆ ಬೇಕಾದ ರೀತಿಯಲ್ಲಿ ನೀರನ್ನು ಬಳಕೆ ಮಾಡುತ್ತಿದ್ದಾರೆ. ಇದರಿಂದ ಬ್ಯಾಡಗಿ ಪಟ್ಟಣಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ಸರಿಪಡಬೇಕು ಎಂದು ಬ್ಯಾಡಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಯಾಸಿ ಅಹ್ಮದಖಾನ ಪಠಾಣ ಅವರು ಮಾತನಾಡಿ, ಶಿಗ್ಗಾಂವ ಪಟ್ಟಣದಲ್ಲಿ ಅಮೃತ ಯೋಜನೆಯಡಿ ಪೈಪ್ಲೈನ್ ಮಾಡಲು ಎಲ್ಲ ಕಡೆ ಅಗೆಯಲಾಗಿದೆ. ಆದರೆ ನೀರಿನ ಮೂಲ ಯಾವುದು ಎಂದು ತೋರಿಸಿಲ್ಲ. ಎಲ್ಲಿಂದ ನೀರು ಕೊಡತಿರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ನಾಗನೂರ ಕೆರೆ ಹಾಗೂ ಮೋತಿತಲಾಬ ಕೆರೆಯಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟೀಸ್: ಸಭೆಯ ಆರಂಭದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ಸಭೆಯಲ್ಲಿ ಹಾಗೂ ಇಂದಿನ ಸಭೆಯಲ್ಲಿ ಗೈರಾದ ಅಧಿಕಾರಿಗಳ ಮಾಹಿತಿ ಪಡೆದುಕೊಂಡರು. ಕಳೆದ ಸಭೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಏನು ಕ್ರಮಕೈಗೊಂಡಿರಿ ಎಂದು ಪ್ರಶ್ನಿಸಿದರು. ಕ್ರಮಕೈಗೊಂಡ ಬಗ್ಗೆ ಮಧ್ಯಾಹ್ನ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಇದೇ ಸಂರ್ಭದಲ್ಲಿ ಸಚಿವರು, ಶಾಸಕರು ಹಾಗೂ ಗಣ್ಯರು ಯುವ ನಿಧಿ ನೋಂದಣಿ ವಿಶೇಷ ಅಭಿಯಾನ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿದರು. ಸಚಿವರು ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಅಲೀಂ ಅಹ್ಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಶಾಸಕರಾದ ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಉಪಸ್ಥಿತರಿದ್ದರು.
ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ , ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟೀಸ್ ನೀಡಲು ಸಚಿವ ಶಿವಾನಂದ ಪಾಟೀಲ ಸೂಚನೆ
Date:
ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ,
ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟೀಸ್ ನೀಡಲು ಸಚಿವ ಶಿವಾನಂದ ಪಾಟೀಲ ಸೂಚನೆ
ಹಾವೇರಿ: ಕುಡಿಯುವ ನೀರು ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಮಾಡಬೇಕು. ಕಾಮಗಾರಿಗಳನ್ನು ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟೀಸ್ ನೀಡಿ ಎಂದು ಅಧಿಕಾರಿಗಳಿಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೆöÊಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳ ಅನುಷ್ಠಾನದಲ್ಲಿ ಅಧಿಕಾರಿಗಳ ಬೇಜವ್ದಾರಿ ಹೇಳಿಕೆ ಸರಿಯಲ್ಲ. ನಾಲ್ಕು ತಿಂಗಳಿಗೊಮ್ಮೆ ಕೆಡಿಪಿ ಸಭೆ ಮಾಡಲಾಗುತ್ತದೆ, ನಾನು ನಿಮ್ಮ ಕಥೆ ಕೇಳು ಬಂದಿಲ್ಲ, ಯೋಜನೆಗಳ ಸಮರ್ಪಕ ಅನುಷ್ಠಾನವಾಗಬೇಕು. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಾವೇರಿ ನಗರಕ್ಕೆ ಪ್ರತಿದಿನ ಇಲ್ಲವಾದರೂ ಐದು ದಿನಗಳಿಗೆ ನೀರು ಪೂರೈಕೆ ಮಾಡಲು ಹಿಂದಿನ ಸಭೆಯಲ್ಲಿ ಹೇಳಲಾಗಿತ್ತು. ಅದನ್ನು ಸರಿಯಾಗಿ ಮಾಡಿಲ್ಲ. ಜೊತೆಗೆ ೨೪*೭ ಕಾಮಗಾರಿ ಪರಿಶೀಲಸಿದದೇ ರೂ.೩೨ ಕೋಟಿ ಗುತ್ತಿಗೆದಾರನಿಗೆ ಪಾವತಿಸಲಾಗಿದೆ. ಅಧಿಕಾಗಳು ಮಲಕೊಂಡಿದ್ರಾ?, ಅಧಿಕಾರಿಗಳು ಅಥವಾ ಸ್ಥಳೀಯ ಶಾಸಕರಾದರೂ ಪರಿಶೀಲನೆ ಮಾಡಬೇಕು. ಅದು ಯಾವುದೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಶಿಸ್ತು ಕ್ರಮಕ್ಕೆ ಸೂಚನೆ: ಯೋಜನೆ ಅನುಷ್ಠಾನದಲ್ಲಿ ನಗರಸಭೆ ಪೌರಾಯುಕ್ತ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ಜವಾಬ್ದಾರಿ ಇದೆ. ಯರ್ಯಾರು ಬಿಲ್ಲಿಗೆ ಸಹಿ ಮಾಡಿದ್ದಾರೆ ಎಂದು ವಿಚಾರಣೆ ನಡೆಸಿ, ಅವರ ಮೇಲೆ ಸೂಕ್ತ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದಲ್ಲಿರುವ ಬೋರವೆಲ್ಗಳ ನೀರಿನ ಮಟ್ಟ ಪರಿಶೀಲಿಸಿ, ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಾರಣ ಹೇಳುವುದು ಬಿಟ್ಟು ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಾಕೀತು ಮಾಡಿದರು.
ಅನುದಾನ ಕೊರತೆ ಇಲ್ಲ: ಅಮೃತ ಯೋಜನೆಯಡಿ ರೂ.೧೦೨ ಕೋಟಿ ಅನುದಾನ ಮಂಜೂರಾಗಿದ್ದು, ಅನುದಾನದ ಕೊರತೆ ಇಲ್ಲ. ಹಾವೇರಿ ಮತ್ತು ಗುತ್ತಲ ಪೈಪ್ಲೈನ್ ಮಾಡದ ಹಾಗೆ ರೂ.೮ ಕೋಟಿ ಪಾವತಿ ಮಾಡಲಾಗಿದೆ. ವರದಿಯಲ್ಲಿ ಆರ್ಥಿಕ ಮತ್ತು ಬೌತಿಕ ಮಾಹಿತಿ ನೀಡಿಲ್ಲ ಎಂದು ಕಾರ್ಯನಿರ್ವಾಹಕ ಅಭಿಯಂತರರನ್ನು ಪ್ರಶ್ನಿಸಿದರು. ಶಿಗ್ಗಾಂವ ಹಾಗೂ ಬಂಕಾಪುರ ಪಟ್ಟಣಗಳಲ್ಲಿ ಮನೆಗಳಿಗೆ ನೀರಿನ ಸಂಪರ್ಕ ನೀಡಿಲ್ಲ. ಮೊದಲು ವೋಹರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಳ್ಳಿ ಎಂದು ಸೂಚನೆ ನೀಡಿದರು.
ಪ್ರಗತಿಯಲ್ಲಿರುವ ಕಾಮಗಾರಿಗಳ ವಿಳಂಬದ ಕುರಿತು ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಚೇರಮನ್ಗೆ ಪತ್ರಬರೆಯುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪೂರ್ಣ ಮಾಹಿತಿ: ಸಣ್ಣ ನೀರಾವರಿ ಇಲಾಖೆಯಿಂದ ನೀಡಿದ ವರದಿ ಅಪೂರ್ಣವಾಗಿದ್ದು, ತಾಲೂಕುವಾರು ಮಾಹಿತಿ ಇಲ್ಲ, ರೂ. ೧೦೫ ಕೋಟಿ ಹಾನಗಲ್ ತಾಲೂಕು ಸಮ್ಮಸಗಿ ಏತ ನೀರಾವರಿ ಯೋಜನೆ ಮಾಹಿತಿ ನೀಡಿಲ್ಲ. ಸರಿಯಾದ ಮಾಹಿತಿ ಇಲ್ಲ ಹೇಗೆ ಪರಿಶೀಲನೆ ಮಾಡಬೇಕು. ಮುಂದಿನ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಬರದಿದ್ದರೆ ಅಮಾನತ್ ಮಾಡಲಾಗುವುದು ಎಚ್ಚರಿಕೆ ನೀಡಿದರು.
ಕಾರ್ಯನಿರ್ವಾಹಕ ಇಂಜನೀಯರ್ ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿದ್ದಾರೆ ಎಂದು ಉತ್ತರಿಸಿದಾಗ, ಕಾಮಗಾರಿ ವಿಳಂಬಮಾಡುವ ಗುತ್ತಿಗೆದಾರನಿಗೆ ನೋಟಿಸ್ ನೀಡಿ ಜೊತೆಗೆ ಬ್ಲಾö್ಯಕ್ ಲಿಸ್ಟ್ ಹಾಕಿ ಎಂದು ಸೂಚನೆ ನೀಡಿದರು.
ವ್ಯಾಪಕ ಪ್ರಚಾರಕ್ಕೆ ಸೂಚನೆ: ಹೆಸ್ಕಾಂ ಇಲಾಖೆ ಪ್ರಗತಿ ಪರಿಶೀಲಿಸಿದ ಸಚಿವರು, ಸೂರ್ಯ ಘರ್ ಯೋಜನೆ ಕುರಿತು ಕರಪತ್ರ ನೀಡಿ ಫೋಟೋ ತೆಗೆಸಿಕೊಂಡರೆ ಆಗಲ್ಲ್ಲ, ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಅವರು ಮಾತನಾಡಿ, ಬ್ಯಾಡಗಿ ಪಟ್ಟಣಕ್ಕೆ ಕುಡಿಯುವ ನೀರಿನ ಉದ್ದೇಶಕ್ಕೆ ಪೂರೈಕೆಯಾಗುವ ನೀರನ್ನು ಮಾರ್ಗ ಮಧ್ಯದಲ್ಲಿ ಹೂಲಿಹಳ್ಳಿ, ಅಸುಂಡಿ ಹಾಗೂ ಕದರಮಂಡಲಗಿಯಲ್ಲಿ ತಮಗೆ ಬೇಕಾದ ರೀತಿಯಲ್ಲಿ ನೀರನ್ನು ಬಳಕೆ ಮಾಡುತ್ತಿದ್ದಾರೆ. ಇದರಿಂದ ಬ್ಯಾಡಗಿ ಪಟ್ಟಣಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ಸರಿಪಡಬೇಕು ಎಂದು ಬ್ಯಾಡಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರಾದ ಯಾಸಿ ಅಹ್ಮದಖಾನ ಪಠಾಣ ಅವರು ಮಾತನಾಡಿ, ಶಿಗ್ಗಾಂವ ಪಟ್ಟಣದಲ್ಲಿ ಅಮೃತ ಯೋಜನೆಯಡಿ ಪೈಪ್ಲೈನ್ ಮಾಡಲು ಎಲ್ಲ ಕಡೆ ಅಗೆಯಲಾಗಿದೆ. ಆದರೆ ನೀರಿನ ಮೂಲ ಯಾವುದು ಎಂದು ತೋರಿಸಿಲ್ಲ. ಎಲ್ಲಿಂದ ನೀರು ಕೊಡತಿರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ನಾಗನೂರ ಕೆರೆ ಹಾಗೂ ಮೋತಿತಲಾಬ ಕೆರೆಯಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟೀಸ್: ಸಭೆಯ ಆರಂಭದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ಸಭೆಯಲ್ಲಿ ಹಾಗೂ ಇಂದಿನ ಸಭೆಯಲ್ಲಿ ಗೈರಾದ ಅಧಿಕಾರಿಗಳ ಮಾಹಿತಿ ಪಡೆದುಕೊಂಡರು. ಕಳೆದ ಸಭೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಏನು ಕ್ರಮಕೈಗೊಂಡಿರಿ ಎಂದು ಪ್ರಶ್ನಿಸಿದರು. ಕ್ರಮಕೈಗೊಂಡ ಬಗ್ಗೆ ಮಧ್ಯಾಹ್ನ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಇದೇ ಸಂರ್ಭದಲ್ಲಿ ಸಚಿವರು, ಶಾಸಕರು ಹಾಗೂ ಗಣ್ಯರು ಯುವ ನಿಧಿ ನೋಂದಣಿ ವಿಶೇಷ ಅಭಿಯಾನ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿದರು. ಸಚಿವರು ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಅಲೀಂ ಅಹ್ಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಶಾಸಕರಾದ ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಉಪಸ್ಥಿತರಿದ್ದರು.