ಗಡಿಯಲ್ಲಿ ಉದ್ವಿಗ್ನ – ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ರ ಕಟ್ಟೆಚ್ಚರ
ಹಾವೇರಿ: ಹಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಉದ್ವಿಗ್ನ ಸ್ಥಿತಿಯ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯಾಧ್ಯಂತ ಸೂಕ್ಷ್ಮ
ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ಪೆಟ್ರೋಲಿಂಗ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯವರನ್ನು ಫಿಕ್ಸ್ ಪಾಯಿಂಟ್ಗೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೮ ಚೆಕ್ಪೋಸ್ಟಗಳನ್ನು ರಚಿಸಿ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು,
ಅನುಮಾನಾಸ್ಪದ ವ್ಯಕ್ತಿ ಹಾಗೂ ವಾಹನಗಳನ್ನು ನಿರಂತರ ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದ್ದಾರೆ.
ರಾಜ್ಯ ನಾಗರೀಕ ರಕ್ಷಣಾ ಚಟುವಟಿಕೆಯ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್.ಪಿ.ಐ ರವರ ನೇತೃತ್ವದಲ್ಲಿ ಎ.ಎಸ್.ಸಿ ತಂಡದಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಜನನಿಬೀಡ ಪ್ರದೇಶಗಳು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು, ಪ್ರಮುಖ
ದೇವಾಲಯಗಳು, ಮಸೀದಿ, ಚರ್ಚ, ವಿದ್ಯುತ್ ಗ್ರೀಡ್ಗಳು, ಪವನ ಶಕ್ತಿ ಘಟಕಗಳು, ಪ್ರವಾಸಿ ಸ್ಥಳಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ಎ.ಎಸ್.ಸಿ ತಪಾಸಣೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ ೦೩ ವರ್ಷಗಳಿಂದ ಸುಮಾರು ೧೮೬ ನಾಗರೀಕರಿಗೆ ಬಂದೂಕು ತರಬೇತಿ ನೀಡಲಾಗಿರುತ್ತದೆ. ಜಿಲ್ಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವ ಹಾಗೂ ಮತೀಯ ವಿಷಯಗಳ ಕುರಿತು ಸಮಾಜದ ಸ್ವಾಸ್ತ್ಯ ಹಾಳು ಮಾಡುವವರ ನಿಗಾವಣೆಗಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ಪೊಲೀಸ್ ಠಾಣಾ
ಮಟ್ಟದಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ತಂಡಗಳನ್ನು ರಚಿಸಿ ಬೆಳವಣಿಗೆಗಳ ಬಗ್ಗೆ ನಿಗಾವಹಿಸಲಾಗಿದೆ. ಜಿಲ್ಲೆಯಲ್ಲಿನ ಚಟುವಟಿಕೆಯಿಂದಿರುವ ರೌಡಿ ಜನರ ಮನೆಗಳಿಗೆ ಭೇಟಿ ಕೊಟ್ಟು ಆಗ್ಗಿಂದಾಗ್ಗೆ ತಪಾಸಣೆ ಮಾಡಿ ಸದರ ವ್ಯಕ್ತಿಗಳ ಚಲನವಲನದ ಮೇಲೆ ನಿಗಾವಹಿಸಲಾಗಿದೆ.
ಜಿಲ್ಲೆಯಲ್ಲಿ ಸುಮಾರು ೧೨೯೫ ಪೊಲೀಸ್ ಇಲಾಖೆಯ, ೧೨೪ ಅಗ್ನಿಶಾಮಕ ಇಲಾಖೆಯ, ೫೪೩ ಗೃಹರಕ್ಷಕ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉದ್ವಿಗ್ನ ಪರಿಸ್ಥಿತಿಗಳಲ್ಲಿ ನಾಗರೀಕರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ಸರ್ವ ಸನ್ನಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಉದ್ವಿಗ್ನ – ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ರ ಕಟ್ಟೆಚ್ಚರ
Date:
ಗಡಿಯಲ್ಲಿ ಉದ್ವಿಗ್ನ – ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ರ ಕಟ್ಟೆಚ್ಚರ
ಹಾವೇರಿ: ಹಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಉದ್ವಿಗ್ನ ಸ್ಥಿತಿಯ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯಾಧ್ಯಂತ ಸೂಕ್ಷ್ಮ
ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ಪೆಟ್ರೋಲಿಂಗ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯವರನ್ನು ಫಿಕ್ಸ್ ಪಾಯಿಂಟ್ಗೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೮ ಚೆಕ್ಪೋಸ್ಟಗಳನ್ನು ರಚಿಸಿ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು,
ಅನುಮಾನಾಸ್ಪದ ವ್ಯಕ್ತಿ ಹಾಗೂ ವಾಹನಗಳನ್ನು ನಿರಂತರ ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದ್ದಾರೆ.
ರಾಜ್ಯ ನಾಗರೀಕ ರಕ್ಷಣಾ ಚಟುವಟಿಕೆಯ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್.ಪಿ.ಐ ರವರ ನೇತೃತ್ವದಲ್ಲಿ ಎ.ಎಸ್.ಸಿ ತಂಡದಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಜನನಿಬೀಡ ಪ್ರದೇಶಗಳು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು, ಪ್ರಮುಖ
ದೇವಾಲಯಗಳು, ಮಸೀದಿ, ಚರ್ಚ, ವಿದ್ಯುತ್ ಗ್ರೀಡ್ಗಳು, ಪವನ ಶಕ್ತಿ ಘಟಕಗಳು, ಪ್ರವಾಸಿ ಸ್ಥಳಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ಎ.ಎಸ್.ಸಿ ತಪಾಸಣೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ ೦೩ ವರ್ಷಗಳಿಂದ ಸುಮಾರು ೧೮೬ ನಾಗರೀಕರಿಗೆ ಬಂದೂಕು ತರಬೇತಿ ನೀಡಲಾಗಿರುತ್ತದೆ. ಜಿಲ್ಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುವ ಹಾಗೂ ಮತೀಯ ವಿಷಯಗಳ ಕುರಿತು ಸಮಾಜದ ಸ್ವಾಸ್ತ್ಯ ಹಾಳು ಮಾಡುವವರ ನಿಗಾವಣೆಗಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ಪೊಲೀಸ್ ಠಾಣಾ
ಮಟ್ಟದಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ತಂಡಗಳನ್ನು ರಚಿಸಿ ಬೆಳವಣಿಗೆಗಳ ಬಗ್ಗೆ ನಿಗಾವಹಿಸಲಾಗಿದೆ. ಜಿಲ್ಲೆಯಲ್ಲಿನ ಚಟುವಟಿಕೆಯಿಂದಿರುವ ರೌಡಿ ಜನರ ಮನೆಗಳಿಗೆ ಭೇಟಿ ಕೊಟ್ಟು ಆಗ್ಗಿಂದಾಗ್ಗೆ ತಪಾಸಣೆ ಮಾಡಿ ಸದರ ವ್ಯಕ್ತಿಗಳ ಚಲನವಲನದ ಮೇಲೆ ನಿಗಾವಹಿಸಲಾಗಿದೆ.
ಜಿಲ್ಲೆಯಲ್ಲಿ ಸುಮಾರು ೧೨೯೫ ಪೊಲೀಸ್ ಇಲಾಖೆಯ, ೧೨೪ ಅಗ್ನಿಶಾಮಕ ಇಲಾಖೆಯ, ೫೪೩ ಗೃಹರಕ್ಷಕ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉದ್ವಿಗ್ನ ಪರಿಸ್ಥಿತಿಗಳಲ್ಲಿ ನಾಗರೀಕರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ಸರ್ವ ಸನ್ನಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.