ಡಿಕೆಶಿ ವಿರುದ್ಧ ಅವಾಚ್ಯ ಶಬ್ದಬಳಕೆ : ವೀರಣ್ಣ ಪಾಟೀಲ ಖಂಡನೆ
ಹಾವೇರಿ: ಹಾವೇರಿನಗರದಲ್ಲಿ ಮಂಗಳವಾರ ಬಿಜೆಪಿಯವರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ, ರಾಣೇಬೆನ್ನೂರಿನ ಮಾಜಿ ಶಾಸಕ ಅರುಣ ಕುಮಾರ ಪೂಜಾರ ಅವರು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕು-ರಿತು ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕ ವೀರಣ್ಣ ಪಾಟೀಲ ಖಂಡಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಅವಾಚ್ಯ ಶಬ್ದಗಳನ್ನು ಬಳಸುವುದು ಸರಿಯಲ್ಲ. ಮೊದಲೇ ಸಮಾಜ ರಾಜಕಾರಣಿಗಳನ್ನು ನೋಡುವ ದೃಷ್ಟಿ ಬದಲಾಗುತ್ತಿದೆ. ಇಂಥ ಸಂದರ್ಭದಲ್ಲಿ ವಿವೇಕದಿಂದ ವರ್ತಿಸುವ ಅಗತ್ಯವಿದೆ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಅರುಣಕುಮಾರ ಪೂಜಾರ ಅವರು ನಾಲಿಗೆ ಹರಿಬಿಡುವ ಮೂಲಕ ಕೊಳಕು ಮನಸ್ಥಿತಿ ಪ್ರದರ್ಶಿಸಿದ್ದಾರೆ. ಇದು ಅವರಿಗೆ ಮತ್ತು ಅವರ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ವೀರಣ್ಣ ಪಾಟೀಲ ಕಿಡಿಕಾರಿದ್ದಾರೆ.
ಈಗಾಗಲೇ ಡಿ.ಕೆ.ಶಿವಕುಮಾರ ಅವರು ಸಂವಿಧಾನದ ಕುರಿತ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ. ನಾಗರಿಕ ಸಮಾಜ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ಎನ್ನುವ ಅರಿವು ಇರಲಿ. ಅರುಣಕುಮಾರ ಪೂಜಾರ ಕ್ಷಮೆಯಾಚಿಸಲಿ ಎಂದು ವೀರಣ್ಣ ಪಾಟೀಲ ಒತ್ತಾಯಿಸಿದ್ದಾರೆ.
ಡಿಕೆಶಿ ವಿರುದ್ಧ ಅವಾಚ್ಯ ಶಬ್ದಬಳಕೆ : ವೀರಣ್ಣ ಪಾಟೀಲ ಖಂಡನೆ
Date:
ಡಿಕೆಶಿ ವಿರುದ್ಧ ಅವಾಚ್ಯ ಶಬ್ದಬಳಕೆ : ವೀರಣ್ಣ ಪಾಟೀಲ ಖಂಡನೆ
ಹಾವೇರಿ: ಹಾವೇರಿನಗರದಲ್ಲಿ ಮಂಗಳವಾರ ಬಿಜೆಪಿಯವರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ, ರಾಣೇಬೆನ್ನೂರಿನ ಮಾಜಿ ಶಾಸಕ ಅರುಣ ಕುಮಾರ ಪೂಜಾರ ಅವರು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕು-ರಿತು ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕ ವೀರಣ್ಣ ಪಾಟೀಲ ಖಂಡಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಪ್ರತಿಭಟನೆಯ ನೆಪದಲ್ಲಿ ಅವಾಚ್ಯ ಶಬ್ದಗಳನ್ನು ಬಳಸುವುದು ಸರಿಯಲ್ಲ. ಮೊದಲೇ ಸಮಾಜ ರಾಜಕಾರಣಿಗಳನ್ನು ನೋಡುವ ದೃಷ್ಟಿ ಬದಲಾಗುತ್ತಿದೆ. ಇಂಥ ಸಂದರ್ಭದಲ್ಲಿ ವಿವೇಕದಿಂದ ವರ್ತಿಸುವ ಅಗತ್ಯವಿದೆ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಅರುಣಕುಮಾರ ಪೂಜಾರ ಅವರು ನಾಲಿಗೆ ಹರಿಬಿಡುವ ಮೂಲಕ ಕೊಳಕು ಮನಸ್ಥಿತಿ ಪ್ರದರ್ಶಿಸಿದ್ದಾರೆ. ಇದು ಅವರಿಗೆ ಮತ್ತು ಅವರ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ವೀರಣ್ಣ ಪಾಟೀಲ ಕಿಡಿಕಾರಿದ್ದಾರೆ.
ಈಗಾಗಲೇ ಡಿ.ಕೆ.ಶಿವಕುಮಾರ ಅವರು ಸಂವಿಧಾನದ ಕುರಿತ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ. ನಾಗರಿಕ ಸಮಾಜ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ಎನ್ನುವ ಅರಿವು ಇರಲಿ. ಅರುಣಕುಮಾರ ಪೂಜಾರ ಕ್ಷಮೆಯಾಚಿಸಲಿ ಎಂದು ವೀರಣ್ಣ ಪಾಟೀಲ ಒತ್ತಾಯಿಸಿದ್ದಾರೆ.