
ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರಗೆ ಸರ್ಕಾರದಿಂದ ಆರ್ಥಿಕ ನೆರವು: ಸಚಿವ ಶಿವಾನಂದ ಪಾಟೀಲ್ ಭರವಸೆ
ಹಾವೇರಿ: ಜವಳಿ ಹಾಗೂ ಸಕ್ಕರೆ ಖಾತೆ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್ ಅವರು ಏ.೯ರಂದು ಗುರುವಾರ ಸಂಜೆ ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ ಮನೆಗೆ ಭೇಟಿಕೊಟ್ಟು ಅಂಗೂರ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ದುಃಖ ಕರ ಸಂಗತಿಯಾಗಿದೆ. ಅವರ ನೆರವಿಗೆ ಬದ್ದ ರಾಗಿದ್ದು, ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಆಗಮಿಸಿದ್ದ ವಿಧಾನಸಭೆಯ ಉಪ ಸಭಾಪತಿ, ಶಾಸಕ ರುದ್ರಪ್ಪ ಲಮಾಣಿ, ಶಾಸಕರು ಹಾಗೂ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬಸವರಾಜ್ ಶಿವಣ್ಣನವರ ಅಂಗೂರ ಅವರ ಆರೋಗ್ಯ ವಿಚಾರಿಸಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯಾವರನ್ನು ಭೇಟಿಯಾಗಿ ಆರ್ಥಿಕ ನೆರವನ್ನು ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಶಾಸಕ ಬಸವರಾಜ್ ಶಿವಣ್ಣನವರ ವ್ಯಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ನಿಂಗಪ್ಪ ಚಾವಡಿ ಸಂಜಯಗಾಂಧಿ ಸಂಜೀವಣ್ಣನವರ, ಮಂಜುನಾಥ ಮನ್ನಂಗಿ, ಅಮ್ರತ ಗುಂಜಾಳ, ಸೇರಿದಂತೆ ಅನೇಕರು ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ದುಃಖ ಕರ ಸಂಗತಿಯಾಗಿದೆ. ಅವರ ನೆರವಿಗೆ ಬದ್ದ ರಾಗಿದ್ದು, ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಆಗಮಿಸಿದ್ದ ವಿಧಾನಸಭೆಯ ಉಪ ಸಭಾಪತಿ, ಶಾಸಕ ರುದ್ರಪ್ಪ ಲಮಾಣಿ, ಶಾಸಕರು ಹಾಗೂ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬಸವರಾಜ್ ಶಿವಣ್ಣನವರ ಅಂಗೂರ ಅವರ ಆರೋಗ್ಯ ವಿಚಾರಿಸಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯಾವರನ್ನು ಭೇಟಿಯಾಗಿ ಆರ್ಥಿಕ ನೆರವನ್ನು ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಶಾಸಕ ಬಸವರಾಜ್ ಶಿವಣ್ಣನವರ ವ್ಯಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಮುಖರಾದ ನಿಂಗಪ್ಪ ಚಾವಡಿ ಸಂಜಯಗಾಂಧಿ ಸಂಜೀವಣ್ಣನವರ, ಮಂಜುನಾಥ ಮನ್ನಂಗಿ, ಅಮ್ರತ ಗುಂಜಾಳ, ಸೇರಿದಂತೆ ಅನೇಕರು ಹಾಜರಿದ್ದರು.
—

