ಮೈಸೂರು ದಸರಾ: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

Date:

ಮೈಸೂರು ದಸರಾ: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಹಾವೇರಿ : ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇ?ಧಿಕಾರಿಗಳು ಪ್ರಕಟಿಸಿದ್ದಾರೆ.
ಸ್ತಬ್ಧಚಿತ್ರ ವಿಶೇ?ತೆ: ೧೯೨೪ರ ಡಿಸೆಂಬರ್ ೨೬ ಮತ್ತು ೨೭ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ ೩೯ನೇ ಅಧಿವೇಶನ ನಡೆದಿತ್ತು.ಈ ವ? ಅಧಿವೇಶನಕ್ಕೆ ೧೦೦ ವ?ಗಳು ತುಂಬುತ್ತಿದೆ.
ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ” ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕ?ಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.
ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು.
ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ”ಎಂದು ಘೋಷಿಸಿ ಮಹತ್ವದ ಹೆಜ್ಜೆಯನ್ನಿಟ್ಟರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.
ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.
ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಒಂದು ಮಹತ್ವದ ಘಟನೆಯಾಗಿದೆ. ಇದು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃಸ್ಥಾಪಿಸುವುದು. ಅಸ್ಪೃಶ್ಯತೆ ಮತ್ತು ಇತರ ವಿ?ಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.
ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾ?ಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾ?ಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.
ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದೊಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ ಅಳವಡಿಸಲಾಗಿತ್ತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ ,ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ.ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು, ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಮೈಸೂರು ದಸರಾ: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಹಾವೇರಿ : ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇ?ಧಿಕಾರಿಗಳು ಪ್ರಕಟಿಸಿದ್ದಾರೆ.
ಸ್ತಬ್ಧಚಿತ್ರ ವಿಶೇ?ತೆ: ೧೯೨೪ರ ಡಿಸೆಂಬರ್ ೨೬ ಮತ್ತು ೨೭ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ ೩೯ನೇ ಅಧಿವೇಶನ ನಡೆದಿತ್ತು.ಈ ವ? ಅಧಿವೇಶನಕ್ಕೆ ೧೦೦ ವ?ಗಳು ತುಂಬುತ್ತಿದೆ.
ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ” ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕ?ಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.
ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು.
ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ”ಎಂದು ಘೋಷಿಸಿ ಮಹತ್ವದ ಹೆಜ್ಜೆಯನ್ನಿಟ್ಟರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.
ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.
ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಒಂದು ಮಹತ್ವದ ಘಟನೆಯಾಗಿದೆ. ಇದು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃಸ್ಥಾಪಿಸುವುದು. ಅಸ್ಪೃಶ್ಯತೆ ಮತ್ತು ಇತರ ವಿ?ಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.
ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾ?ಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾ?ಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.
ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದೊಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ ಅಳವಡಿಸಲಾಗಿತ್ತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ ,ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ.ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು, ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...