
ರಾಣೇಬೆನ್ನೂರು ಬಳಿ ಬೆಂಕಿ ತಗುಲಿ ಸುಟ್ಟು ಕರಕಲಾದ ಪಲ್ಲಕ್ಕಿ ಬಸ್ -ಅಪಾಯದಿಂದ ಪ್ರಯಾಣಿಕರು ಪಾರು
ಹಾವೇರಿ: ಬೆಂಗಳೂರಿ-ನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದ್ದ, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದೆ.
ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ. ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ಪ್ರಯಾಣಿಕರನ್ನು ಬೆರೆ ಬಸ್ ನಲ್ಲಿ ಕಳಿಸಲಾಗಿದೆ.

