ಶೀಘ್ರವೇ ವೈದ್ಯಕೀಯ ಕಾಲೇಜ್ ಮುಖ್ಯಮಂತ್ರಿಗಳಿಂದ ಉದ್ಘಾಟನೆ
ತ್ವರಿತ ಕಾಮಗಾರಿಗೆ ರೂ.೨೫ ಕೋಟಿ ಬಿಡುಗಡೆ-ಸಚಿವ ಶಿವಾನಂದ ಪಾಟೀಲ
ಹಾವೇರಿ : ಇದೇ ವರ್ಷ ನೂತನ ವೈದ್ಯಕೀಯ ಕಾಲೇಜಿನಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಶೀಘ್ರವೇ ಸರ್ಕಾರಿ ವೈದ್ಯಕೀಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಾವೇರಿ ವೈದ್ಯಕೀಯ ಕಾಲೇಜ್ ಸೇರಿದಂತೆ ರಾಜ್ಯ ನಾಲ್ಕು ಕಾಲೇಜುಗಳ ಎಸ್.ಐ.ಟಿ. ತನಿಖೆ ನಡೆಯುತ್ತಿದೆ. ಅದಾಗ್ಯೂ ಕಾಲೇಜಿನ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳಿಗೆ ವಿಶೇಷ ಮನವಿಮಾಡಿಕೊಂಡು ರೂ.೨೫ ಕೋಟಿ ಬಿಡುಗಡೆ ಗೊಳಿಸಿದೆ. ಅಕ್ಟೋಬರ್ ಮಾಹೆಯೊಳಗೆ ಎ ಮತ್ತು ಬಿ ಬ್ಲಾಕ್ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಕಿಕೊಂಡಿರು ಯೋಜನೆಗಳನ್ನು ೨೦೨೪ ರೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಕುಡಿಯುವ ನೀರಿನ ವಿಚಾರದಲ್ಲಿ ಜಿಲ್ಲೆಯೂ ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲಿದೆ ಎಂದು ಮಾಹಿತಿ ನೀಡಿದರು.
ಶೀಘ್ರವೇ ವೈದ್ಯಕೀಯ ಕಾಲೇಜ್ ಮುಖ್ಯಮಂತ್ರಿಗಳಿಂದ ಉದ್ಘಾಟನೆ ತ್ವರಿತ ಕಾಮಗಾರಿಗೆ ರೂ.೨೫ ಕೋಟಿ ಬಿಡುಗಡೆ-ಸಚಿವ ಶಿವಾನಂದ ಪಾಟೀಲ
Date:
ಶೀಘ್ರವೇ ವೈದ್ಯಕೀಯ ಕಾಲೇಜ್ ಮುಖ್ಯಮಂತ್ರಿಗಳಿಂದ ಉದ್ಘಾಟನೆ
ತ್ವರಿತ ಕಾಮಗಾರಿಗೆ ರೂ.೨೫ ಕೋಟಿ ಬಿಡುಗಡೆ-ಸಚಿವ ಶಿವಾನಂದ ಪಾಟೀಲ
ಹಾವೇರಿ : ಇದೇ ವರ್ಷ ನೂತನ ವೈದ್ಯಕೀಯ ಕಾಲೇಜಿನಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಶೀಘ್ರವೇ ಸರ್ಕಾರಿ ವೈದ್ಯಕೀಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಾವೇರಿ ವೈದ್ಯಕೀಯ ಕಾಲೇಜ್ ಸೇರಿದಂತೆ ರಾಜ್ಯ ನಾಲ್ಕು ಕಾಲೇಜುಗಳ ಎಸ್.ಐ.ಟಿ. ತನಿಖೆ ನಡೆಯುತ್ತಿದೆ. ಅದಾಗ್ಯೂ ಕಾಲೇಜಿನ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳಿಗೆ ವಿಶೇಷ ಮನವಿಮಾಡಿಕೊಂಡು ರೂ.೨೫ ಕೋಟಿ ಬಿಡುಗಡೆ ಗೊಳಿಸಿದೆ. ಅಕ್ಟೋಬರ್ ಮಾಹೆಯೊಳಗೆ ಎ ಮತ್ತು ಬಿ ಬ್ಲಾಕ್ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಕಿಕೊಂಡಿರು ಯೋಜನೆಗಳನ್ನು ೨೦೨೪ ರೊಳಗಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಕುಡಿಯುವ ನೀರಿನ ವಿಚಾರದಲ್ಲಿ ಜಿಲ್ಲೆಯೂ ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲಿದೆ ಎಂದು ಮಾಹಿತಿ ನೀಡಿದರು.