“ಸಂಪಾಯಿತಲೇ ಪರಾಕ್” ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Date:

 

 

“ಸಂಪಾಯಿತಲೇ ಪರಾಕ್”
ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
ಹಾವೇರಿ : ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ೫ಕ್ಕೆ ಲಕ್ಷಾಂತರ ಭಕ್ತರ sಸಮ್ಮುಖದ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್”
ಕಾರ್ಣಿಕದ ನುಡಿ ಹೇಳಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸುಚನೆ ಎನ್ನುವುದು ಭಕ್ತರ ನಂಬಿಕೆಯಾಗಿದೆ.
ಸೋಮವಾರ ಪ್ರಾತಃಕಾಲ ೪ರಿಂದ ಮೈಲಾರಲಿಂಗೇಶ್ವರ, ಗಂಗಿ ಮಾಳಮ್ಮ ಹಾಗೂ ಹೆಗ್ಗಪ್ಪ ದೇವರ ಉತ್ಸವ ಡೆಂಕನಮರಡಿಗೆ ಗುಪ್ತ ಮೌನ ಸವಾರಿ ಕಾರ್ಯಕ್ರಮಗಳು ನಡೆದವು.
ಭಾರತ ಹುಣ್ಣಿಮೆ ಮೈಲಾರಲಿಂಗೇಶ್ವರನ ಭಕ್ತರಿಗೆ ಮಹತ್ವದ ಹುಣ್ಣಿಮೆಯಾಗಿದ್ದು, ಪ್ರಸಕ್ತ ವರ್ಷವು ಭಾರತ ಹುಣ್ಣಿಮೆಗೆ ಮೈಲಾರಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ನಾಲೈದು ದಿನಗಳ ಕಾಲ ಭಕ್ತರು ಕ್ಷೇತ್ರದಲ್ಲಿದ್ದು, ಸಾಂಪ್ರದಾಯಕ ಪೂಜೆ ಕೈಂಕರ್ಯ ಕೈಗೊಂಡು ಶ್ರೀಸ್ವಾಮಿಯ ದರ್ಶನ ಪಡೆದರು. ನಂತರ – ಕಪಿಲ ಮುನಿಗಳ ಪೀಠದ ಗುರುಗಳಿಂದ ದೀಕ್ಷೆ ಪಡೆದ ಗೊರವಯ್ಯ ನುಡಿಯುವ ದೇವವಾಣಿ ಕಾರ್ಣಿಕ ಆಲಿಸಿ ಜಾತ್ರೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

 

“ಸಂಪಾಯಿತಲೇ ಪರಾಕ್”
ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
ಹಾವೇರಿ : ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ೫ಕ್ಕೆ ಲಕ್ಷಾಂತರ ಭಕ್ತರ sಸಮ್ಮುಖದ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್”
ಕಾರ್ಣಿಕದ ನುಡಿ ಹೇಳಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸುಚನೆ ಎನ್ನುವುದು ಭಕ್ತರ ನಂಬಿಕೆಯಾಗಿದೆ.
ಸೋಮವಾರ ಪ್ರಾತಃಕಾಲ ೪ರಿಂದ ಮೈಲಾರಲಿಂಗೇಶ್ವರ, ಗಂಗಿ ಮಾಳಮ್ಮ ಹಾಗೂ ಹೆಗ್ಗಪ್ಪ ದೇವರ ಉತ್ಸವ ಡೆಂಕನಮರಡಿಗೆ ಗುಪ್ತ ಮೌನ ಸವಾರಿ ಕಾರ್ಯಕ್ರಮಗಳು ನಡೆದವು.
ಭಾರತ ಹುಣ್ಣಿಮೆ ಮೈಲಾರಲಿಂಗೇಶ್ವರನ ಭಕ್ತರಿಗೆ ಮಹತ್ವದ ಹುಣ್ಣಿಮೆಯಾಗಿದ್ದು, ಪ್ರಸಕ್ತ ವರ್ಷವು ಭಾರತ ಹುಣ್ಣಿಮೆಗೆ ಮೈಲಾರಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ನಾಲೈದು ದಿನಗಳ ಕಾಲ ಭಕ್ತರು ಕ್ಷೇತ್ರದಲ್ಲಿದ್ದು, ಸಾಂಪ್ರದಾಯಕ ಪೂಜೆ ಕೈಂಕರ್ಯ ಕೈಗೊಂಡು ಶ್ರೀಸ್ವಾಮಿಯ ದರ್ಶನ ಪಡೆದರು. ನಂತರ – ಕಪಿಲ ಮುನಿಗಳ ಪೀಠದ ಗುರುಗಳಿಂದ ದೀಕ್ಷೆ ಪಡೆದ ಗೊರವಯ್ಯ ನುಡಿಯುವ ದೇವವಾಣಿ ಕಾರ್ಣಿಕ ಆಲಿಸಿ ಜಾತ್ರೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...