
ಹಾವೇರಿ ಜಿಲ್ಲಾ ಕಾಂಗ್ರೆಸ್ಗೆ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ ಆನವಟ್ಟಿ
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಹಾ ಪ್ರಧಾನ ಕಾರ್ಯದರ್ಶಿಯಾಗಿ ತಕ್ಷಣ ದಿಂದ ಜಾರಿಗೆ ಬರುವಂತೆ ಯುವ ನಾಯಕ, ಹಾಗೂ ಕನ್ನಡಪರ ಹೋರಾಟಗಾರ ರಮೇಶ ಆನವಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ತಾವು ಪಕ್ಷದ ಶಾಸಕರು ಹಾಗೂ ಹಿರಿಯ ಮುಖಂಡರು ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ (ಪಾಟೀಲ) ಅದೇಶ ಹೊರಡಿಸಿದ್ದಾರೆ.
ನೇಮಕಾತಿ ಆದೇಶ ಪತ್ರವನ್ನು ರಮೇಶ ಆನವಟ್ಟಿ ಅವರಿಗೆ ಹಾವೇರಿ ಶಾಸಕರು ಹಾಗೂ ವಿಧಾನಸಭಾ ಸಭಾಧ್ಯಕ್ಷರಾದ ರುದ್ರಪ್ಪ ಮಾ ಲಮಾಣಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಶಂಕರ ಮೆಹರವಾಡೆ, ಗುಡ್ಡನಗೌಡ್ರ ಅಂದಾನಿಗೌಡ್ರ, ಸುಭಾಷ್ ಚವ್ಹಾಣ, ವಿಭೂತಿ ಶೆಟ್ಟಿ, ಚಂದ್ರಶೇಖರ ಹಟ್ಟಿ, ಮಲ್ಲಿಕ್ ಬನ್ನಿ ಬಸವರಾಜ ಬಣಕಾರ್ ಮತ್ತಿತರರು ಇದ್ದರು.
ತಮ್ಮನ್ನು ಗುರುತಿಸಿ ಹಾವೇರಿ ಜಿಲ್ಲಾ ಕಾಂಗ್ರೆಸ್ಗೆ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಮಾಡಿದ ರಾಜ್ಯ ಹಾಗೂ ಜಿಲ್ಲಾ ಮುಖಂಡರಿಗೆ ಹಾವೇರಿ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭಾ ಸಭಾಧ್ಯಕ್ಷರಾದ ರುದ್ರಪ್ಪ ಮಾ ಲಮಾಣಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರುಗಳಿಗೆ ರಮೇಶ ಆನವಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

