ಹಾವೇರಿ ಜಿಲ್ಲೆಗೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ : ಜಿಲ್ಲೆಯ ಕಡಕೋಳದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ!
ಹಾವೇರಿ : ಹಾವೇರಿ ಜಿಲ್ಲೆಗೂ ವಕ್ಫ್ ಆಸ್ತಿ ವಿವಾದದ ಬಿಸಿತಾಗಿಗಿದ್ದು, ಬುಧವಾರ ರಾತ್ರಿ ಹಾವೇರಿ ಜಿಲ್ಲೆಯ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಬೋರ್ಡ್ ಹೆಸರಿನಲ್ಲಿ ವಾಸವಿದ್ದ ಮನೆ ಖಾಲಿ ಮಾಡಿಸಬಹುದು ಎಂಬ ಆತಂಕಕ್ಕೆ ಒಳಗಾಗಿದ್ದ ಕೆಲವರು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ. ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ೧೫ ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಾವೇರಿ ಎಸ್ ಪಿ ಅಂಶು ಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮಗೆ ಸಂಜೆ ೭:೩೦ಕ್ಕೆ ಮಾಹಿತಿ ಬಂತು. ಕಡಕೋಳ ಗ್ರಾಮದಲ್ಲಿ ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಗಲಾಟಿಗೆ ಸಂಬಂಧಿಸಿದಂತೆ ದೂರು ಕೊಡಲು ಯಾರು ಸಹ ತಯಾರು ಇಲ್ಲ. ನಾವೇ ಸ್ವಯಂ ಪ್ರೇರಿತ ದೂರದಾಗಲಿಸಿಕೊಳ್ಳುತ್ತೇವೆ ಎಂದರು.
ಹಲ್ಲೆಗೊಳಗಾದವರಿಂದಲೂ ಕೂಡ ಮಾಹಿತಿ ಪಡೆದುಕೊಳ್ಳುತ್ತೇವೆ. ಗಲಾಟಿಗೆ ಸಂಬಂಧಿಸಿದಂತೆ ೧೫ ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ ನಾಲ್ಕು ಕೆ ಎಸ್ ಆರ್ ಪಿ ತುಕಡಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್ ಮಾರ್ಚ್ ಕೂಡ ಮಾಡಲಾಗುತ್ತದೆ ಎಂದು ಎಸ್.ಪಿ ಅಂಶು ಕುಮಾರ್ ತಿಳಿಸಿದರು.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ವಿಜಯಮಾಹಾಂತೇಶ ದಾನಮ್ಮನವರ ಗ್ರಾಮದಲ್ಲಿ ಗರಡಿ ಮನೆ ಸಂಬಂಧಿಸಿದಂತೆ ಗೊಂದಲ ಇತ್ತು. ವಕ್ಫ್ ಆಸ್ತಿ ಸಂಬಂಧಿಸಿದಂತೆ ಜನರು ಪ್ರತಿ ದಿನ ಪತ್ರಿಕೆಗಳಲ್ಲಿ ಓದಿ ಭಯಗೊಂಡಿದ್ದಾರೆ. ವಕ್ಫ್ ಆಸ್ತಿ ಎಂದು ಹೆಸರು ನಮೂದಿಸುತ್ತಾರೆಂದು ಭಯಗೊಂಡು ಗಲಾಟೆ ಮಾಡಿದ್ದಾರೆ. ಕಡಕೋಳದಲ್ಲಿ ಮೂರು ವಕ್ಫ್ ಆಸ್ತಿ ಇದೆ ಎಂದು ಅವರು ವೈಯಕ್ತಿಕವಾಗಿ ಯಾರಿಗೂ ನಾವು ನೋಟಿಸ್ ಕೊಟ್ಟಿರಲಿಲ್ಲ. ಹಿಂದೆ ಇದ್ದ ಪಟ್ಟಿ ಮೇಲೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದೆವು. ವಕ್ಫ್ ಆಸ್ತಿ ಎಂದು ಮನೆ ದಾಖಲೆಗಳಲ್ಲೂ ನಮೂದಿಸುತ್ತಾರೆಂದು ಜನ ಭಯಗೊಂಡಿದ್ದಾರೆ. ಆ ಭಯದಿಂದ ಗಲಾಟೆ ಮಾಡಿದ್ದಾರೆ. ಯಾರಿಗೂ ನೋಟಿಸ್ ಕೊಟ್ಟಿರಲಿಲ್ಲ, ಈಗ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಗೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ : ಜಿಲ್ಲೆಯ ಕಡಕೋಳದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ!
Date:
ಹಾವೇರಿ ಜಿಲ್ಲೆಗೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ : ಜಿಲ್ಲೆಯ ಕಡಕೋಳದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ!
ಹಾವೇರಿ : ಹಾವೇರಿ ಜಿಲ್ಲೆಗೂ ವಕ್ಫ್ ಆಸ್ತಿ ವಿವಾದದ ಬಿಸಿತಾಗಿಗಿದ್ದು, ಬುಧವಾರ ರಾತ್ರಿ ಹಾವೇರಿ ಜಿಲ್ಲೆಯ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಮುಸ್ಲಿಂ ಮುಖಂಡರ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಬೋರ್ಡ್ ಹೆಸರಿನಲ್ಲಿ ವಾಸವಿದ್ದ ಮನೆ ಖಾಲಿ ಮಾಡಿಸಬಹುದು ಎಂಬ ಆತಂಕಕ್ಕೆ ಒಳಗಾಗಿದ್ದ ಕೆಲವರು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ. ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ೧೫ ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹಾವೇರಿ ಎಸ್ ಪಿ ಅಂಶು ಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮಗೆ ಸಂಜೆ ೭:೩೦ಕ್ಕೆ ಮಾಹಿತಿ ಬಂತು. ಕಡಕೋಳ ಗ್ರಾಮದಲ್ಲಿ ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಗಲಾಟಿಗೆ ಸಂಬಂಧಿಸಿದಂತೆ ದೂರು ಕೊಡಲು ಯಾರು ಸಹ ತಯಾರು ಇಲ್ಲ. ನಾವೇ ಸ್ವಯಂ ಪ್ರೇರಿತ ದೂರದಾಗಲಿಸಿಕೊಳ್ಳುತ್ತೇವೆ ಎಂದರು.
ಹಲ್ಲೆಗೊಳಗಾದವರಿಂದಲೂ ಕೂಡ ಮಾಹಿತಿ ಪಡೆದುಕೊಳ್ಳುತ್ತೇವೆ. ಗಲಾಟಿಗೆ ಸಂಬಂಧಿಸಿದಂತೆ ೧೫ ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ ನಾಲ್ಕು ಕೆ ಎಸ್ ಆರ್ ಪಿ ತುಕಡಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್ ಮಾರ್ಚ್ ಕೂಡ ಮಾಡಲಾಗುತ್ತದೆ ಎಂದು ಎಸ್.ಪಿ ಅಂಶು ಕುಮಾರ್ ತಿಳಿಸಿದರು.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ವಿಜಯಮಾಹಾಂತೇಶ ದಾನಮ್ಮನವರ ಗ್ರಾಮದಲ್ಲಿ ಗರಡಿ ಮನೆ ಸಂಬಂಧಿಸಿದಂತೆ ಗೊಂದಲ ಇತ್ತು. ವಕ್ಫ್ ಆಸ್ತಿ ಸಂಬಂಧಿಸಿದಂತೆ ಜನರು ಪ್ರತಿ ದಿನ ಪತ್ರಿಕೆಗಳಲ್ಲಿ ಓದಿ ಭಯಗೊಂಡಿದ್ದಾರೆ. ವಕ್ಫ್ ಆಸ್ತಿ ಎಂದು ಹೆಸರು ನಮೂದಿಸುತ್ತಾರೆಂದು ಭಯಗೊಂಡು ಗಲಾಟೆ ಮಾಡಿದ್ದಾರೆ. ಕಡಕೋಳದಲ್ಲಿ ಮೂರು ವಕ್ಫ್ ಆಸ್ತಿ ಇದೆ ಎಂದು ಅವರು ವೈಯಕ್ತಿಕವಾಗಿ ಯಾರಿಗೂ ನಾವು ನೋಟಿಸ್ ಕೊಟ್ಟಿರಲಿಲ್ಲ. ಹಿಂದೆ ಇದ್ದ ಪಟ್ಟಿ ಮೇಲೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದೆವು. ವಕ್ಫ್ ಆಸ್ತಿ ಎಂದು ಮನೆ ದಾಖಲೆಗಳಲ್ಲೂ ನಮೂದಿಸುತ್ತಾರೆಂದು ಜನ ಭಯಗೊಂಡಿದ್ದಾರೆ. ಆ ಭಯದಿಂದ ಗಲಾಟೆ ಮಾಡಿದ್ದಾರೆ. ಯಾರಿಗೂ ನೋಟಿಸ್ ಕೊಟ್ಟಿರಲಿಲ್ಲ, ಈಗ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ತಿಳಿಸಿದ್ದಾರೆ.