ಹಾವೇರಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ್ ದಾನಮ್ಮನವರ್ ವರ್ಗ
ಹಾವೇರಿ: ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಒಟ್ಟು ೨೧ ಐಎಎಸ್ ಅಧಿಕಾರಿಗಳನ್ನು ಜು.೪ರಂದು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾವೇರಿಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ಡಾ. ವಿಜಯಮಹಾಂತೇಶ ದಾನಮ್ಮನವರ್ ವರ್ಗಾವಣೆ ಮಾಡಲಾಗಿದೆ.
ಹಾವೇರಿಜಿಲ್ಲೆಯ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರನ್ನು ಖಜಾನೆ ಆಯುಕ್ತರು ಬೆಂಗಳೂರಿಗೆ ವರ್ಗಾವಣೆ ಗೊಳಿಸಿ ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ಕೂಡಲೇ ನೂತನ ಜಾಗಗಳಿಗೆ ರಿಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್ ಕುಮಾರ್ ಎಸ್. ನಿರ್ದೇಶಿಸಿದ್ದಾರೆ.