ಹಾವೇರಿ ಜಿಲ್ಲೆಯ ೩ ಗ್ರಾ.ಪಂ.ಗಳಿಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಸಿಇಒ ಅಕ್ಷಯ ಶ್ರೀಧರ್
ಹಾವೇರಿ : ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹುನುಗುಂದ, ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಹಾಗೂ ಶಿಡೇನೂರು ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ-೨೦೨೪ ಪ್ರಶಸ್ತಿ ಲಭಿಸಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ
ರಾಷ್ಟ್ರೀಯ ಪಂಚಾಯತ್ ಪರುಸ್ಕಾರ -೨೦೨೪ರ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಪ್ರದಾನ ಸಮಾರಂಭ ದಿನಾಂಕ ೧೧-೧೨-೨೦೨೪ ರಂದು ನವದೆಹಲಿಯ ವಿಜ್ಞಾನ ಭನದಲ್ಲಿ ನಡೆಯಲಿದೆ. ಭಾರತದ ಗೌರವ್ವಾನಿತ ರಾಷ್ಟ್ರಪತಿಗಳು ಈ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪುರಸ್ಕಾರ ಪಡೆದ ಪಂಚಾಯತಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಮೂರು ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳಿಗೆ/ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿ ಹಿನ್ನೆಲೆ : ಉತ್ತಮ ಆಡಳಿತ ಹೊಂದಿರುವ ಪಂಚಾಯತ್ಗಳಿಗಾಗಿ ಪ್ರಶಸ್ತಿ ಲಬಿಸಿದ್ದು, ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಆಡಳಿತ ಮತ್ತು ಸೇವೆಗಾಗಿ ನಿರಂತರ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಕರ್ಯವನ್ನು ಅರಿತು, ತಪಾಸಣೆ ನಂತರ ಕೇಂದ್ರ ಸರ್ಕಾರಕ್ಕೆ ಶಿಪಾರ್ಸಸು ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಆಯ್ಕೆ ಮಾಡಿ ಪ್ರಶಸ್ತಿ ಪುರಸ್ಕಾರ ನೀಡಲಾಗಿರುತ್ತದೆ.
ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಗೆ ಇನ್ನು ಹೆಚ್ಚು ಪ್ರಶಸ್ತಿ ದೊರಕಲು, ಉತ್ತಮ ಆಡಳಿತವನ್ನು ನೀಡುವಂತೆ ಈ ಗ್ರಾಮ ಪಂಚಾಯತಿಗಳನ್ನು ಮಾದರಿ ಮಾಡುವ ಮೂಲಕ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಉತ್ತಮ ಆಡಳಿತ ಲಭಿಸುವಂತೆ ಮಾಡುವ ಗುರಿ ಹೊಂದಲಾಗಿದೆ ಜಿ.ಪಂ.ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ಭಾಗವಹಿಸುವವರ ವಿವರ : ನವದೆಹಲಿ ವಿಜ್ಞಾನಭವನದಲ್ಲಿ ನಡೆಯುವ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಶಿಗ್ಗಾಂವ ತಾಲೂಕು ಹುನಗುಂದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾಗರಾಜ ಮೂಲಿಮನಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೃಪತಿ ಭೂಸರೆಡ್ಡಿ, ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಬಿಬಿ ಆಯುಷಾ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಾರದಾ ಕುದರಿ, ಬುಡಪನಹಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸಪ್ಪ ಡಿಳ್ಳೆಪ್ಪ ಗೊರವರ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪರುಶುರಾಮ ಅಗಸನಹಳ್ಳಿ ಭಾಗವಹಿಸಲಿದ್ದಾರೆ.
ಹಾವೇರಿ ಜಿಲ್ಲೆಯ ೩ ಗ್ರಾ.ಪಂ.ಗಳಿಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಸಿಇಒ ಅಕ್ಷಯ ಶ್ರೀಧರ್
Date:
ಹಾವೇರಿ ಜಿಲ್ಲೆಯ ೩ ಗ್ರಾ.ಪಂ.ಗಳಿಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಸಿಇಒ ಅಕ್ಷಯ ಶ್ರೀಧರ್
ಹಾವೇರಿ : ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹುನುಗುಂದ, ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಹಾಗೂ ಶಿಡೇನೂರು ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ-೨೦೨೪ ಪ್ರಶಸ್ತಿ ಲಭಿಸಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ
ರಾಷ್ಟ್ರೀಯ ಪಂಚಾಯತ್ ಪರುಸ್ಕಾರ -೨೦೨೪ರ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಪ್ರದಾನ ಸಮಾರಂಭ ದಿನಾಂಕ ೧೧-೧೨-೨೦೨೪ ರಂದು ನವದೆಹಲಿಯ ವಿಜ್ಞಾನ ಭನದಲ್ಲಿ ನಡೆಯಲಿದೆ. ಭಾರತದ ಗೌರವ್ವಾನಿತ ರಾಷ್ಟ್ರಪತಿಗಳು ಈ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪುರಸ್ಕಾರ ಪಡೆದ ಪಂಚಾಯತಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಮೂರು ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳಿಗೆ/ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿ ಹಿನ್ನೆಲೆ : ಉತ್ತಮ ಆಡಳಿತ ಹೊಂದಿರುವ ಪಂಚಾಯತ್ಗಳಿಗಾಗಿ ಪ್ರಶಸ್ತಿ ಲಬಿಸಿದ್ದು, ಗ್ರಾಮ ಪಂಚಾಯತಿಗಳಲ್ಲಿ ಉತ್ತಮ ಆಡಳಿತ ಮತ್ತು ಸೇವೆಗಾಗಿ ನಿರಂತರ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಕರ್ಯವನ್ನು ಅರಿತು, ತಪಾಸಣೆ ನಂತರ ಕೇಂದ್ರ ಸರ್ಕಾರಕ್ಕೆ ಶಿಪಾರ್ಸಸು ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಆಯ್ಕೆ ಮಾಡಿ ಪ್ರಶಸ್ತಿ ಪುರಸ್ಕಾರ ನೀಡಲಾಗಿರುತ್ತದೆ.
ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಗೆ ಇನ್ನು ಹೆಚ್ಚು ಪ್ರಶಸ್ತಿ ದೊರಕಲು, ಉತ್ತಮ ಆಡಳಿತವನ್ನು ನೀಡುವಂತೆ ಈ ಗ್ರಾಮ ಪಂಚಾಯತಿಗಳನ್ನು ಮಾದರಿ ಮಾಡುವ ಮೂಲಕ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಉತ್ತಮ ಆಡಳಿತ ಲಭಿಸುವಂತೆ ಮಾಡುವ ಗುರಿ ಹೊಂದಲಾಗಿದೆ ಜಿ.ಪಂ.ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ಭಾಗವಹಿಸುವವರ ವಿವರ : ನವದೆಹಲಿ ವಿಜ್ಞಾನಭವನದಲ್ಲಿ ನಡೆಯುವ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಶಿಗ್ಗಾಂವ ತಾಲೂಕು ಹುನಗುಂದ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾಗರಾಜ ಮೂಲಿಮನಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೃಪತಿ ಭೂಸರೆಡ್ಡಿ, ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಬಿಬಿ ಆಯುಷಾ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಾರದಾ ಕುದರಿ, ಬುಡಪನಹಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸಪ್ಪ ಡಿಳ್ಳೆಪ್ಪ ಗೊರವರ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪರುಶುರಾಮ ಅಗಸನಹಳ್ಳಿ ಭಾಗವಹಿಸಲಿದ್ದಾರೆ.