ಹಾವೇರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆ – ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಡಿಸಿ ಡಾ ದಾನಮ್ಮನವರ

Date:

ಹಾವೇರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಡಿಸಿ ಡಾ ದಾನಮ್ಮನವರ
ಹಾವೇರಿ : ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯದ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ(ಹೀಟ್ ವೇವ್) ನೀಡಲಾಗಿದೆ. ಹಾಗಾಗಿ ಈ ಸಮಯದಲ್ಲಿ ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಲಹೆಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಿ: ಸಾರ್ವಜನಿಕರು, ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ತಿಳಿದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದ? ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ ಟೋಪಿ ಅಥವಾ ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.
ರಾತ್ರಿ ಪ್ರಯಾಣ: ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರು ತೆಗದುಕೊಂಡು ಹೋಗಬೇಕು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.
ಮನೆಯಲ್ಲಿ ತಯಾರಿಸಿದ ತಂಪು ಪಾನೀಯ ಉತ್ತಮ: ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ, ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಕಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
ನೆರಳಲ್ಲಿ ಇರಿಸಿ: ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಬೇಕು ಹಾಗೂ ಅವುಗಳಿಗೆ ಕುಡಿಯಲು ಸಾಕ? ನೀರು ನೀಡಬೇಕು.
ತಣ್ಣೀರು ಸ್ನಾನ ಮಾಡಿ: ಆದಷ್ಟು ಫ್ಯಾನ್ ಬಳಸಬೇಕು, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಆದ? ತಂಪಾದ ಸಮಯದಲ್ಲಿ ಕೆಲಸ ಮಾಡಬೇಕು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇ?ವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
ಏನು ಮಾಡಬಾರದು: ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದು, ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆ ಮಾಡುವುದು, ಮಧ್ಯಾಹ್ನ ೧೨ ರಿಂದ ೩ ರವರೆಗೆ ಹೊರಗೆ ಕೆಲಸ ಮಾಡುವುದು, ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದು ಮಾಡಬಾರದು.
ಅಡಿಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು. ಇವುಗಳಿಂದ ಹೊಟ್ಟೆ ನೋವು ಉಂಟುಮಾಡುವ ಸಾಧ್ಯತೆ ಇರುತ್ತದೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಗಡೆ ಹೋಗಬಾರದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಾಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಡಿಸಿ ಡಾ ದಾನಮ್ಮನವರ
ಹಾವೇರಿ : ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯದ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶದ ಹಿನ್ನಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ(ಹೀಟ್ ವೇವ್) ನೀಡಲಾಗಿದೆ. ಹಾಗಾಗಿ ಈ ಸಮಯದಲ್ಲಿ ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಲಹೆಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಿ: ಸಾರ್ವಜನಿಕರು, ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ತಿಳಿದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದ? ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ ಟೋಪಿ ಅಥವಾ ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.
ರಾತ್ರಿ ಪ್ರಯಾಣ: ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರು ತೆಗದುಕೊಂಡು ಹೋಗಬೇಕು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.
ಮನೆಯಲ್ಲಿ ತಯಾರಿಸಿದ ತಂಪು ಪಾನೀಯ ಉತ್ತಮ: ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ, ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಕಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
ನೆರಳಲ್ಲಿ ಇರಿಸಿ: ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಬೇಕು ಹಾಗೂ ಅವುಗಳಿಗೆ ಕುಡಿಯಲು ಸಾಕ? ನೀರು ನೀಡಬೇಕು.
ತಣ್ಣೀರು ಸ್ನಾನ ಮಾಡಿ: ಆದಷ್ಟು ಫ್ಯಾನ್ ಬಳಸಬೇಕು, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಆದ? ತಂಪಾದ ಸಮಯದಲ್ಲಿ ಕೆಲಸ ಮಾಡಬೇಕು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.
ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇ?ವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
ಏನು ಮಾಡಬಾರದು: ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದು, ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆ ಮಾಡುವುದು, ಮಧ್ಯಾಹ್ನ ೧೨ ರಿಂದ ೩ ರವರೆಗೆ ಹೊರಗೆ ಕೆಲಸ ಮಾಡುವುದು, ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದು ಮಾಡಬಾರದು.
ಅಡಿಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು. ಇವುಗಳಿಂದ ಹೊಟ್ಟೆ ನೋವು ಉಂಟುಮಾಡುವ ಸಾಧ್ಯತೆ ಇರುತ್ತದೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಗಡೆ ಹೋಗಬಾರದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಾಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...