
-
ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆಯಾಜ್ಞೆ
- ಹಾವೇರಿ :ಹಾಲಿ ಸದಸ್ಯರ ಅಧಿಕಾರಾವಧಿ ಇನ್ನೂ ಬಾಕಿಯಿರುವಾಗಲೇ ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ತಡೆಯಾಜ್ಞೆ ನೀಡಿದೆ
ನಗರಸಭೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ ರಾಮು ಮಾಳಗಿ ಹಾಗೂ ಸದಸ್ಯರಾದ ಶ್ರೀಮತಿ ಕವಿತಾ ಅಡಿವೆಯ್ಯ ಯಲವಿಗಿಮಠ, ಪ್ರಸನ್ನಸಿಂಗ್ ಶೇಖರಸಿಂಗ್ ಧಾರವಾಡಕರ್ ಹಾಗೂ ರವಿ ಸದಾನಂದ್ ದೊಡ್ಡಮನಿ ಅವರು ಸಲ್ಲಿಸಿದ್ದ ರಿಟ್ ಅರ್ಜಿ (WP 108279/2025)
ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ. ಆರ್. ಹೆಗಡೆ ಅವರಿದ್ದ ಏಕಸದಸ್ಯ ಪೀಠವು ಹಾವೇರಿ ನಗರಸಭೆಗೆ ಆಡಳಿತಾಧಿಕಾರಿ ನೇಮಿಸಲು ಮುಂದಾಗಿದ್ದ ಸರ್ಕಾರದ ಕ್ರಮವನ್ನು ಪ್ರತಿಬಂಧಿಸಿ ಮಧ್ಯoತರ ಆದೇಶ ಹೊರಡಿಸಿ, ಸರ್ಕಾರಕ್ಕೆ ನೋಟೀಸ್ ಜಾರಿಗೊಳಿಸಿದೆ
ಅರ್ಜಿದಾರರ ಪರವಾಗಿ ನ್ಯಾಯವಾದಿ ಕೆ. ಎಸ್. ಕೋರಿಶೆಟ್ಟರ್ ಅವರು
ವಾದ ಮಂಡಿಸಿದ್ದರು.

