ಹಾವೇರಿ ಮೀಸಲು ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ-ಹಾನಗಲ್ಲ ಕ್ಷೇತ್ರಕ್ಕೆ ಶಿವರಾಜ ಸಜ್ಜನರಗೆ ಟಿಕೆಟ್

Date:

ಹಾವೇರಿ ಮೀಸಲು ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ-ಹಾನಗಲ್ಲ ಕ್ಷೇತ್ರಕ್ಕೆ ಶಿವರಾಜ ಸಜ್ಜನರಗೆ ಟಿಕೆಟ್
ಹಾವೇರಿ : ಬಿಜೆಪಿ ಎರಡನೆ ಪಟ್ಟಿ ಬಿಡುಗಡೆಮಾಡಿದ್ದು ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ ಟಿಕೆಟ್ ನೀಡಿದ್ದು, ಜಹಾನಗಲ್ಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ನ್ನು ಶಿವರಾಜ ಸಜ್ಜನರ ಅವರಿಗೆ ನೀಡಿದೆ.
ಈ ಬಗ್ಗೆ ಬಿಜೆಪಿ ಬುಧವಾರ ರಾತ್ರಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದು ಹಾಲಿ ಶಾಸಕ ಮತ್ತು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಹಾವೇರಿ ಶಾಸಕ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಅವರ ಅಭಿಮಾನಿಗಳು ತೀವೃ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತ ಹಾನಗಲ್ಲ ಕ್ಷೇತ್ರಕ್ಕೆ ಮಾಜಿ ಶಾಸಕ , ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದ ಶಿವರಾಜ ಸಜ್ಜನರಿಗೆ ಟಿಕೆಟ್ ನೀಡಿದೆ.
ಹಾವೇರಿ ಮತ್ತು ಹಾನಗಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಳೆದು ತೂಗಿ ಬಿಜೆಪಿ ಟಿಕೆಟ್ ಅಂತಿಮ ಗೊಳಿಸಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಕರ್ನಾಟಕ ರಾಜ್ಯದ ನಾಯಕರ ಜೊತೆಗೆ ಮೇಲಿಂದ ಮೇಲೆ ಸಭೆ ನಡೆಸಿ ಅಭ್ಯರ್ಥಿಗಳ ಪೂರ್ವಾಪರ ನೋಡಿ, ಕಾರ್ಯವೈಖರಿ, ಅಪರಾಧ ಹಿನ್ನೆಲೆ ನೋಡಿ ಅಳೆದು ತೂಗಿ ಟಿಕೆಟ್ ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.

ಗವಿಸಿದ್ದಪ್ಪ ದ್ಯಾಮಣ್ಣನವರ ಬ್ಯಾಡಗಿಯಲ್ಲಿ  ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್ -2 ತಹಶೀಲ್ದಾರ ಎಂದು ಕಾಯ೵ನಿವ೵ಹಿಸುತ್ತಿದ್ದರು. ಇವರೂ ಮೂಲತಹ ರಾಣೇಬೆನ್ನೂರಿನವರಾಗಿದ್ದಾರೆ.

ಇತ್ತ ನೆಹರು ಓಲೇಕಾರ ಅವರಿಗೆ ಟಿಕೆಟ್  ತಪ್ಪಿದ ಕಾರಣ ಅವರ ಬೆಂಬಲಿಗರು ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ಮೀಸಲು ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ-ಹಾನಗಲ್ಲ ಕ್ಷೇತ್ರಕ್ಕೆ ಶಿವರಾಜ ಸಜ್ಜನರಗೆ ಟಿಕೆಟ್
ಹಾವೇರಿ : ಬಿಜೆಪಿ ಎರಡನೆ ಪಟ್ಟಿ ಬಿಡುಗಡೆಮಾಡಿದ್ದು ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ ಟಿಕೆಟ್ ನೀಡಿದ್ದು, ಜಹಾನಗಲ್ಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ನ್ನು ಶಿವರಾಜ ಸಜ್ಜನರ ಅವರಿಗೆ ನೀಡಿದೆ.
ಈ ಬಗ್ಗೆ ಬಿಜೆಪಿ ಬುಧವಾರ ರಾತ್ರಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದು ಹಾಲಿ ಶಾಸಕ ಮತ್ತು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಹಾವೇರಿ ಶಾಸಕ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಅವರ ಅಭಿಮಾನಿಗಳು ತೀವೃ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತ ಹಾನಗಲ್ಲ ಕ್ಷೇತ್ರಕ್ಕೆ ಮಾಜಿ ಶಾಸಕ , ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದ ಶಿವರಾಜ ಸಜ್ಜನರಿಗೆ ಟಿಕೆಟ್ ನೀಡಿದೆ.
ಹಾವೇರಿ ಮತ್ತು ಹಾನಗಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಳೆದು ತೂಗಿ ಬಿಜೆಪಿ ಟಿಕೆಟ್ ಅಂತಿಮ ಗೊಳಿಸಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಕರ್ನಾಟಕ ರಾಜ್ಯದ ನಾಯಕರ ಜೊತೆಗೆ ಮೇಲಿಂದ ಮೇಲೆ ಸಭೆ ನಡೆಸಿ ಅಭ್ಯರ್ಥಿಗಳ ಪೂರ್ವಾಪರ ನೋಡಿ, ಕಾರ್ಯವೈಖರಿ, ಅಪರಾಧ ಹಿನ್ನೆಲೆ ನೋಡಿ ಅಳೆದು ತೂಗಿ ಟಿಕೆಟ್ ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.

ಗವಿಸಿದ್ದಪ್ಪ ದ್ಯಾಮಣ್ಣನವರ ಬ್ಯಾಡಗಿಯಲ್ಲಿ  ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್ -2 ತಹಶೀಲ್ದಾರ ಎಂದು ಕಾಯ೵ನಿವ೵ಹಿಸುತ್ತಿದ್ದರು. ಇವರೂ ಮೂಲತಹ ರಾಣೇಬೆನ್ನೂರಿನವರಾಗಿದ್ದಾರೆ.

ಇತ್ತ ನೆಹರು ಓಲೇಕಾರ ಅವರಿಗೆ ಟಿಕೆಟ್  ತಪ್ಪಿದ ಕಾರಣ ಅವರ ಬೆಂಬಲಿಗರು ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...