ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ಸ್ವಾಗತಾರ್ಹ: ಉಡಚಪ್ಪ ಮಾಳಗಿ
ಹಾವೇರಿ: ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ಸಂಬಂಧಿಸಿದಂತೆ ಅಧಿಕೃತ ಆದೇಶ ಮಾಡಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಮಂತ್ರಿಗಳ ನಿಲುವು ಸಾಗತಾರ್ಹ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಳೆದ ಡಿ.೨೧ ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.ಈ ಮೀಸಲು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲು ಕಡ್ಡಾಯವಾಗಿದ್ದು, ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ,ಮಂಡಳಿ,ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ.
.ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ವ್ಯವಸ್ಥೆ ಜಾರಿ ಮಾಡಲಾಗಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ನೀಡುವಂತೆ ವಿವಿಧ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬರುತ್ತಿದ್ದವು. ಈಗ ಸರ್ಕಾರದ ಆದೇಶ ಬಂದಿದ್ದು, ಈ ಆದೇಶದಿಂದ ಸಾಮಾಜಿಕ ನ್ಯಾಯ ಸಿಗುವಂತಾಗಲಿ ಮತ್ತು ಸಂಬಂಧಿಸಿದ ಎಲ್ಲಾ ಇಲಖೆಗಳು ಕಡ್ಡಾಯ ಆದೇಶ ಪಾಲನೆ ಮಾಡುವಂತೆ ಸರ್ಕಾರ ಕಾಳಜಿವಹಿಸಲಿ ಎಂದು ಸರ್ಕಾರಕ್ಕೆ ಕೃತಜ್ಞೆಗಳನ್ನು ರಾಜ್ಯ ಮುಖಂಡರಾದ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ಸ್ವಾಗತಾರ್ಹ: ಉಡಚಪ್ಪ ಮಾಳಗಿ
Date:
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ಸ್ವಾಗತಾರ್ಹ: ಉಡಚಪ್ಪ ಮಾಳಗಿ
ಹಾವೇರಿ: ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ಸಂಬಂಧಿಸಿದಂತೆ ಅಧಿಕೃತ ಆದೇಶ ಮಾಡಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಮಂತ್ರಿಗಳ ನಿಲುವು ಸಾಗತಾರ್ಹ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಳೆದ ಡಿ.೨೧ ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.ಈ ಮೀಸಲು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲು ಕಡ್ಡಾಯವಾಗಿದ್ದು, ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ,ಮಂಡಳಿ,ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ.
.ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ವ್ಯವಸ್ಥೆ ಜಾರಿ ಮಾಡಲಾಗಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲು ನೀಡುವಂತೆ ವಿವಿಧ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬರುತ್ತಿದ್ದವು. ಈಗ ಸರ್ಕಾರದ ಆದೇಶ ಬಂದಿದ್ದು, ಈ ಆದೇಶದಿಂದ ಸಾಮಾಜಿಕ ನ್ಯಾಯ ಸಿಗುವಂತಾಗಲಿ ಮತ್ತು ಸಂಬಂಧಿಸಿದ ಎಲ್ಲಾ ಇಲಖೆಗಳು ಕಡ್ಡಾಯ ಆದೇಶ ಪಾಲನೆ ಮಾಡುವಂತೆ ಸರ್ಕಾರ ಕಾಳಜಿವಹಿಸಲಿ ಎಂದು ಸರ್ಕಾರಕ್ಕೆ ಕೃತಜ್ಞೆಗಳನ್ನು ರಾಜ್ಯ ಮುಖಂಡರಾದ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.